ಚಾಮರಾಜನಗರ

ಚಾ.ನಗರ| ಆಸ್ತಿ ವಿವಾದ: ದಲಿತ ಸಮುದಾಯದಿಂದ ಎರಡು ದಲಿತ ಕುಟುಂಬಗಳಿಗೆ ಬಹಿಷ್ಕಾರ

ಚಾಮರಾಜನಗರ : ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲೆಯ ದಲಿತ ಸಮುದಾಯವು ನಾಲ್ಕು ವರ್ಷಗಳ ಕಾಲ ತಮ್ಮದೇ ಸಮುದಾಯಕ್ಕೆ ಸೇರಿದ ಎರಡು ಕುಟುಂಬಗಳಿಗೆ ಬಹಿಷ್ಕಾರ ವಿಧಿಸಿದೆ.

ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ ಬಹಿಷ್ಕಾರಕ್ಕೊಳಗಾದ ಕುಟುಂಬಗಳ ಸದಸ್ಯರು ದಲಿತರ ಕಾಲೋನಿಯಲ್ಲಿರುವ ಮನೆಗಳಲ್ಲಿ ಊಟ ಮಾಡುವಂತಿಲ್ಲ ಮತ್ತು ಅಂಗಡಿಗಳಿಗೆ ತೆರಳುವಂತಿಲ್ಲ. ಸಮುದಾಯದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕುಟುಂಬದ ಸದಸ್ಯರನ್ನು ಆಹ್ವಾನಿಸಲಾಗುವುದಿಲ್ಲ ಅಥವಾ ಭಾಗವಹಿಸಲು ಅನುಮತಿಸುವುದಿಲ್ಲ.

ಈ ಕುಟುಂಬಗಳ ಮಕ್ಕಳೂ ಕಾಲೋನಿಯ ಇತರ ಮಕ್ಕಳೊಂದಿಗೆ ಆಟವಾಡುವಂತಿಲ್ಲ ಎಂದು ಹೇಳಲಾಗಿದೆ.

ದಲಿತ ಸಮುದಾಯದ ಹಿರಿಯರಾದ ಯಜಮಾನ್ ಚನ್ನಂಜಯ್ಯ, ನಿವೃತ್ತ ಶಿಕ್ಷಕ ಮತ್ತು ನಗರ ಪಾಲಿಕೆಯಲ್ಲಿ ನೀರು ಸರಬರಾಜು ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಮಹದೇವಯ್ಯ ಅವರು ಬಹಿಷ್ಕಾರದ ಆದೇಶವನ್ನು ನೀಡಿದ್ದಾರೆ. ಬಹಿಷ್ಕಾರದ ಆದೇಶವನ್ನು ಪಂಚಾಯಿತಿ ನಡೆಸುವ ಸಮಯದಲ್ಲಿ ನೀಡಲಾಗಿದೆ.

ಬಹಿಷ್ಕಾರಕ್ಕೊಳಗಾಗಿರುವ ರಾಮಸಮುದ್ರ ವಾರ್ಡ್‌ನ ಎರಡು ಕುಟುಂಬಗಳು, ತಮಗೆ ಮಾನಸಿಕ ಹಿಂಸೆ ಮತ್ತು ಅವಮಾನ ಮಾಡಲಾಗುತ್ತಿದೆ. ಯಾರೊಬ್ಬರೂ ತಮಗೆ ನ್ಯಾಯ ನೀಡುತ್ತಿಲ್ಲ. ಜಿಲ್ಲಾಧಿಕಾರಿ ಮಧ್ಯ ಪ್ರವೇಶಿಸಿ ತಮ್ಮ ಕುಟುಂಬದವರ ಮೇಲಿನ ಬಹಿಷ್ಕಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಸಂತ್ರಸ್ತರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಇದರೊಂದಿಗೆ ತಹಸೀಲ್ದಾರ್, ಸಮಾಜ ಕಲ್ಯಾಣ ಇಲಾಖೆ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

31 mins ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

33 mins ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

35 mins ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

37 mins ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

43 mins ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

49 mins ago