ಚಾಮರಾಜನಗರ

ಚಾ.ನಗರ | ಮನುಸ್ಮೃತಿ ಪ್ರತಿ ಹರಿದು ಪ್ರತಿಭಟನೆ

ಚಾಮರಾಜನಗರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಹಾಕಿದ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಮುಖಂಡರು ನಗರದಲ್ಲಿ ಗುರುವಾರ ಮನುಸ್ಮೃತಿಯ ಪ್ರತಿಯನ್ನು ಹರಿದು ಪ್ರತಿಭಟನೆ ಮಾಡಿದರು.

ಇಲ್ಲಿನ ಭುವನೇಶ್ವರಿ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ಒಕ್ಕೂಟ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಮನುಸ್ಮೃತಿ ಪ್ರತಿಯನ್ನು ಸುಡಲು ಮುಂದಾದಾಗ ಪೊಲೀಸರು ತಡೆದರು. ಹೀಗಾಗಿ
ಹರಿದು ಹಾಕಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸಿ.ರಾಜಣ್ಣ ಯರಿಯೂರು ಮಾತನಾಡಿ, ಅಂಬೇಡ್ಕರ್ ಅವರ ಹೋರಾಟವನ್ನು ಮುಂದುವರಿಸುವ ಸಲುವಾಗಿ ಮನುಸ್ಮೃತಿ ಸುಡುವ ಪ್ರತಿಭಟನೆ ಮಾಡಲಾಗಿದ್ದು, ಶ್ರೇಣೀಕೃತ ಜಾತಿ ವ್ಯವಸ್ಥೆಗೆ ಮುನ್ನಡಿ ಬರೆದು ಭಾರತವನ್ನು ಅಂಧಕಾರಕ್ಕೆ ತಳ್ಳಿದ್ಧ ಮನುಸ್ಮೃಯನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ಸುಟ್ಟು ಹಾಕಿ ೯೮ ವರ್ಷಗಳು ಆಗಿರುವುದಾಗಿ ಹೇಳಿದರು.

ಇದನ್ನು ಓದಿ: ನಾಳೆ ದೆಹಲಿಗೆ ತೆರಳಲಿದ್ದಾರೆ ಸಿಎಂ ಸಿದ್ದರಾಮಯ್ಯ

ಜಾತಿ ಅಸಮಾನತೆ, ಲಿಂಗ ತಾರತಮ್ಯ, ಮಹಿಳೆಯರ ಮೇಲಿನ ದಬ್ಬಾಳಿಕೆ, ಬಹುಜನರ ಮೇಲೆ ದೌರ್ಜನ್ಯ, ಸತಿಸಹಗಮನ ಪದ್ಧತಿ, ಬಾಲ್ಯ ವಿವಾಹ, ಬೆತ್ತಲೆಸೇವೆ, ದೇವದಾಸಿ ಪದ್ಧತಿ, ಶೂದ್ರಾತಿಶೂದ್ರರಿಗೆ ಅಕ್ಷರ ಜ್ಞಾನ ನಿಷಿದ್ಧ ಮುಂತಾದ ಅನಿಷ್ಟ ಪದ್ಧತಿಗಳು ಶತಮಾನಗಳ ಕಾಲ ಮುಂದುವರಿಯಲು ಕಾರಣವಾದ ಮನುಸ್ಮೃತಿಯನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ೧೯೨೭ರ ಡಿ.೨೫ರಂದು ಸಾರ್ವಜನಿಕವಾಗಿ ಸುಟ್ಟು ಹಾಕಿದ್ದನ್ನು ಇದೇ ವೇಳೆ ಸ್ಮರಿಸಿದರು.

ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಕಲೀಲ್ ಉಲ್ಲಾ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸಿ.ಎಂ.ಶಿವಣ್ಣ, ಕೆರೆಹಳ್ಳಿ ಬಸವರಾಜು, ಮಹಿಳಾ ಸಂಯೋಜಕಿ ಎಂ.ಆರ್.ಪ್ರಭಾವತಿ, ಜನಶಕ್ತಿ ಸುರೇಶ್, ಸಂಘಟನಾ ಸಂಚಾಲಕರಾದ ಶಿವಕುಮಾರ್, ಸಿ.ರಂಗಸ್ವಾಮಿ, ನಂಜುಂಡಸ್ವಾಮಿ, ತಾಲ್ಲೂಕು ಅಧ್ಯಕ್ಷ ರಂಗಸ್ವಾಮಿ ಮಾಡ್ರಹಳ್ಳಿ, ಶಾಂತರಾಜು, ಇದಾಯತ್ ಷರೀಫ್, ಸಾಹಿತಿ ಸಿದ್ದರಾಜು, ಆಟೋ ಉಮೇಶ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

4 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

4 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

4 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

4 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

4 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

4 hours ago