ಚಾಮರಾಜನಗರ

ಚಾ.ನಗರ – ಜಿಲ್ಲೆಯಲ್ಲಿ 48 ಸಾವಿರ ನಿವೇಶನ ರಹಿತರು : ಸಚಿವ ವಿಸೋಮಣ್ಣ

ಹನೂರು: ಕೈಗೊಳ್ಳಲಾಗಿರುವ ಸಮೀಕ್ಷೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ 55 ಸಾವಿರ ವಸತಿ ರಹಿತರು, 48 ಸಾವಿರ ನಿವೇಶನ ರಹಿತರು ಕಂಡು ಬಂದಿರುತ್ತಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ಉತ್ತರ ನೀಡಿದ್ದಾರೆ.

ವಿಧಾನಮಂಡಲದ ಅಧಿವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಅವರ ಪ್ರಶ್ನೆಗೆ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಉತ್ತರಿಸಿದ್ದು, 2011ರಲ್ಲಿ ಎಸ್‍ಇಸಿಸಿ ಸಮೀಕ್ಷೆಯಲ್ಲಿ ಕೈಬಿಡಲಾದ ವಸತಿ ರಹಿತರ ಕುಟುಂಬಗಳನ್ನು ಗುರ್ತಿಸಲು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ 2018ರಲ್ಲಿ ಕೈಗೊಳ್ಳಲಾಗಿದ್ದ ಸಮೀಕ್ಷೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ 50,654 ವಸತಿ ರಹಿತರು ಹಾಗೂ 38,845 ನಿವೇಶನ ರಹಿತರು ಕಂಡು ಬಂದಿದ್ದಾರೆ. ಹಾಗೆಯೇ ನಗರ ಪ್ರದೇಶದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕೈಗೊಳ್ಳಲಾಗಿದ್ದ ಸಮೀಕ್ಷೆಯಲ್ಲಿ 5,047 ವಸತಿ ರಹಿತರು ಹಾಗೂ 10,064 ನಿವೇಶನ ರಹಿತರು ಕಂಡು ಬಂದಿದ್ದಾರೆ ಎಂದು ತಿಳಿಸಿದ್ದಾರೆ.

ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ಶಾಸಕ ಆರ್.ನರೇಂದ್ರ ಅವರ ಪ್ರಶ್ನೆಗೆ ಸಚಿವ ಮುನಿರತ್ನ ಉತ್ತರಿಸಿದ್ದು, ಚಾ.ನಗರ ಜಿಲ್ಲೆಯಲ್ಲಿ 1,082 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿರುವುದಾಗಿ ಅಂದಾಜಿಸಲಾಗಿದ್ದು, 346 ರೈತರಿಗೆ 42.82 ಲಕ್ಷ ರೂ ಇನ್‍ಪುಟ್ ಸಬ್ಸಿಡಿಯನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಿರುವುದಾಗಿ ಕಂದಾಯ ಇಲಾಖೆ ವರದಿ ನೀಡಿದೆ ಎಂದು ಉತ್ತರ ನೀಡಿದ್ದಾರೆ.

andolanait

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

11 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

12 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

12 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

13 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

14 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

22 hours ago