ಹನೂರು: ಕೈಗೊಳ್ಳಲಾಗಿರುವ ಸಮೀಕ್ಷೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ 55 ಸಾವಿರ ವಸತಿ ರಹಿತರು, 48 ಸಾವಿರ ನಿವೇಶನ ರಹಿತರು ಕಂಡು ಬಂದಿರುತ್ತಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ಉತ್ತರ ನೀಡಿದ್ದಾರೆ.
ವಿಧಾನಮಂಡಲದ ಅಧಿವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಅವರ ಪ್ರಶ್ನೆಗೆ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಉತ್ತರಿಸಿದ್ದು, 2011ರಲ್ಲಿ ಎಸ್ಇಸಿಸಿ ಸಮೀಕ್ಷೆಯಲ್ಲಿ ಕೈಬಿಡಲಾದ ವಸತಿ ರಹಿತರ ಕುಟುಂಬಗಳನ್ನು ಗುರ್ತಿಸಲು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ 2018ರಲ್ಲಿ ಕೈಗೊಳ್ಳಲಾಗಿದ್ದ ಸಮೀಕ್ಷೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ 50,654 ವಸತಿ ರಹಿತರು ಹಾಗೂ 38,845 ನಿವೇಶನ ರಹಿತರು ಕಂಡು ಬಂದಿದ್ದಾರೆ. ಹಾಗೆಯೇ ನಗರ ಪ್ರದೇಶದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕೈಗೊಳ್ಳಲಾಗಿದ್ದ ಸಮೀಕ್ಷೆಯಲ್ಲಿ 5,047 ವಸತಿ ರಹಿತರು ಹಾಗೂ 10,064 ನಿವೇಶನ ರಹಿತರು ಕಂಡು ಬಂದಿದ್ದಾರೆ ಎಂದು ತಿಳಿಸಿದ್ದಾರೆ.
ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ಶಾಸಕ ಆರ್.ನರೇಂದ್ರ ಅವರ ಪ್ರಶ್ನೆಗೆ ಸಚಿವ ಮುನಿರತ್ನ ಉತ್ತರಿಸಿದ್ದು, ಚಾ.ನಗರ ಜಿಲ್ಲೆಯಲ್ಲಿ 1,082 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿರುವುದಾಗಿ ಅಂದಾಜಿಸಲಾಗಿದ್ದು, 346 ರೈತರಿಗೆ 42.82 ಲಕ್ಷ ರೂ ಇನ್ಪುಟ್ ಸಬ್ಸಿಡಿಯನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಿರುವುದಾಗಿ ಕಂದಾಯ ಇಲಾಖೆ ವರದಿ ನೀಡಿದೆ ಎಂದು ಉತ್ತರ ನೀಡಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…