ಚಾಮರಾಜನಗರ: ಗರ್ಭಿಣಿ ಪತ್ನಿಗೆ ಜ್ಯೂಸ್ನೊಂದಿಗೆ ಮದ್ಯ ಕುಡಿಸಿ ಬಳಿಕ ಕತ್ತು ಹಿಸುಕಿ ಕೊಂದಿದ್ದ ಪತಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.
ಕೊಳ್ಳೇಗಾಲ ತಾಲ್ಲೂಕಿನ ರಾಚಪ್ಪಾಜಿ ನಗರದ ಮುತ್ತುರಾಜ್ ಎಂಬಾತ ಶಿಕ್ಷೆಗೊಳಗಾಗಿರುವ ಅಪರಾಧಿ. ೨೦೧೩ ರಲ್ಲಿ ಗರ್ಭಿಣಿ ಪತ್ನಿ ಕೊಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು ಮುತ್ತುರಾಜ್ಗೆ ಜೀವಾವಧಿ ಶಿಕ್ಷೆ ಮತ್ತು ೨.೧೦ ಲಕ್ಷ ರೂ. ದಂಡ ವಿಧಿಸಿದ್ದಾರೆ.
ಏನಿದು ಕೊಲೆ ಕಹಾನಿ?: ರಾಚಪ್ಪಾಜಿ ನಗರದ ನಿವಾಸಿ ಮುತ್ತುರಾಜ್ ಟ್ರ್ಯಾಕ್ಟರ್ ಚಾಲಕನಾಗಿದ್ದು, ಅದೇ ಗ್ರಾಮದ ಜ್ಯೋತಿ ಎಂಬ ಅನ್ಯಜಾತಿಯ ಯುವತಿಯನ್ನು ಪ್ರೀತಿಸಿ ಮನೆಯವರ ವಿರೋಧದ ನಡುವೆ ವಿವಾಹವಾಗಿದ್ದ. ಬಳಿಕ, ತಗಾದೆ ತೆಗೆದು ಪತ್ನಿ ಜೊತೆ ನಿತ್ಯ ರಂಪಾಟ ಮಾಡುತ್ತಿದ್ದ. ಈ ಮಧ್ಯೆ ಜ್ಯೋತಿ ೩ ತಿಂಗಳ ಗರ್ಭಿಣಿಯಾಗಿದ್ದಳು. ಗರ್ಭಿಣಿಯಾಗಿರುವುದರಿಂದ ತವರು ಮನೆಗೆ ಹೋಗಿ ಬಾ ಎಂದು ಪುಸಲಾಯಿಸಿ ಬೈಕಿನಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ಜ್ಯೂಸ್ ನೊಟ್ಟಿಗೆ ಮದ್ಯ ಸೇರಿಸಿ ಕುಡಿಸಿ ಬಳಿಕ ಆಕೆಯ ದುಪ್ಪಟ್ಟಾದಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದ. ಗುರುತು ಪತ್ತೆಯಾಗದಿರಲೆಂದು ಎಡಕೆನ್ನೆಯನ್ನೇ ಸುಟ್ಟು ಪರಾರಿಯಾಗಿದ್ದ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುತ್ತುರಾಜ್ನನ್ನು ಬಂಧಿಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ನಿರಂತರ ವಿಚಾರಣೆ ನಡೆದು ಮುತ್ತುರಾಜ್ನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಟಿ.ಹೆಚ್.ಲೋಲಾಕ್ಷಿ ವಾದ ಮಂಡಿಸಿದ್ದರು.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…