ಚಾಮರಾಜನಗರ: ಗರ್ಭಿಣಿ ಪತ್ನಿಗೆ ಜ್ಯೂಸ್ನೊಂದಿಗೆ ಮದ್ಯ ಕುಡಿಸಿ ಬಳಿಕ ಕತ್ತು ಹಿಸುಕಿ ಕೊಂದಿದ್ದ ಪತಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.
ಕೊಳ್ಳೇಗಾಲ ತಾಲ್ಲೂಕಿನ ರಾಚಪ್ಪಾಜಿ ನಗರದ ಮುತ್ತುರಾಜ್ ಎಂಬಾತ ಶಿಕ್ಷೆಗೊಳಗಾಗಿರುವ ಅಪರಾಧಿ. ೨೦೧೩ ರಲ್ಲಿ ಗರ್ಭಿಣಿ ಪತ್ನಿ ಕೊಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು ಮುತ್ತುರಾಜ್ಗೆ ಜೀವಾವಧಿ ಶಿಕ್ಷೆ ಮತ್ತು ೨.೧೦ ಲಕ್ಷ ರೂ. ದಂಡ ವಿಧಿಸಿದ್ದಾರೆ.
ಏನಿದು ಕೊಲೆ ಕಹಾನಿ?: ರಾಚಪ್ಪಾಜಿ ನಗರದ ನಿವಾಸಿ ಮುತ್ತುರಾಜ್ ಟ್ರ್ಯಾಕ್ಟರ್ ಚಾಲಕನಾಗಿದ್ದು, ಅದೇ ಗ್ರಾಮದ ಜ್ಯೋತಿ ಎಂಬ ಅನ್ಯಜಾತಿಯ ಯುವತಿಯನ್ನು ಪ್ರೀತಿಸಿ ಮನೆಯವರ ವಿರೋಧದ ನಡುವೆ ವಿವಾಹವಾಗಿದ್ದ. ಬಳಿಕ, ತಗಾದೆ ತೆಗೆದು ಪತ್ನಿ ಜೊತೆ ನಿತ್ಯ ರಂಪಾಟ ಮಾಡುತ್ತಿದ್ದ. ಈ ಮಧ್ಯೆ ಜ್ಯೋತಿ ೩ ತಿಂಗಳ ಗರ್ಭಿಣಿಯಾಗಿದ್ದಳು. ಗರ್ಭಿಣಿಯಾಗಿರುವುದರಿಂದ ತವರು ಮನೆಗೆ ಹೋಗಿ ಬಾ ಎಂದು ಪುಸಲಾಯಿಸಿ ಬೈಕಿನಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ಜ್ಯೂಸ್ ನೊಟ್ಟಿಗೆ ಮದ್ಯ ಸೇರಿಸಿ ಕುಡಿಸಿ ಬಳಿಕ ಆಕೆಯ ದುಪ್ಪಟ್ಟಾದಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದ. ಗುರುತು ಪತ್ತೆಯಾಗದಿರಲೆಂದು ಎಡಕೆನ್ನೆಯನ್ನೇ ಸುಟ್ಟು ಪರಾರಿಯಾಗಿದ್ದ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುತ್ತುರಾಜ್ನನ್ನು ಬಂಧಿಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ನಿರಂತರ ವಿಚಾರಣೆ ನಡೆದು ಮುತ್ತುರಾಜ್ನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಟಿ.ಹೆಚ್.ಲೋಲಾಕ್ಷಿ ವಾದ ಮಂಡಿಸಿದ್ದರು.
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…