ಚಾಮರಾಜನಗರ: ಗರ್ಭಿಣಿ ಪತ್ನಿಗೆ ಜ್ಯೂಸ್ನೊಂದಿಗೆ ಮದ್ಯ ಕುಡಿಸಿ ಬಳಿಕ ಕತ್ತು ಹಿಸುಕಿ ಕೊಂದಿದ್ದ ಪತಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.
ಕೊಳ್ಳೇಗಾಲ ತಾಲ್ಲೂಕಿನ ರಾಚಪ್ಪಾಜಿ ನಗರದ ಮುತ್ತುರಾಜ್ ಎಂಬಾತ ಶಿಕ್ಷೆಗೊಳಗಾಗಿರುವ ಅಪರಾಧಿ. ೨೦೧೩ ರಲ್ಲಿ ಗರ್ಭಿಣಿ ಪತ್ನಿ ಕೊಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು ಮುತ್ತುರಾಜ್ಗೆ ಜೀವಾವಧಿ ಶಿಕ್ಷೆ ಮತ್ತು ೨.೧೦ ಲಕ್ಷ ರೂ. ದಂಡ ವಿಧಿಸಿದ್ದಾರೆ.
ಏನಿದು ಕೊಲೆ ಕಹಾನಿ?: ರಾಚಪ್ಪಾಜಿ ನಗರದ ನಿವಾಸಿ ಮುತ್ತುರಾಜ್ ಟ್ರ್ಯಾಕ್ಟರ್ ಚಾಲಕನಾಗಿದ್ದು, ಅದೇ ಗ್ರಾಮದ ಜ್ಯೋತಿ ಎಂಬ ಅನ್ಯಜಾತಿಯ ಯುವತಿಯನ್ನು ಪ್ರೀತಿಸಿ ಮನೆಯವರ ವಿರೋಧದ ನಡುವೆ ವಿವಾಹವಾಗಿದ್ದ. ಬಳಿಕ, ತಗಾದೆ ತೆಗೆದು ಪತ್ನಿ ಜೊತೆ ನಿತ್ಯ ರಂಪಾಟ ಮಾಡುತ್ತಿದ್ದ. ಈ ಮಧ್ಯೆ ಜ್ಯೋತಿ ೩ ತಿಂಗಳ ಗರ್ಭಿಣಿಯಾಗಿದ್ದಳು. ಗರ್ಭಿಣಿಯಾಗಿರುವುದರಿಂದ ತವರು ಮನೆಗೆ ಹೋಗಿ ಬಾ ಎಂದು ಪುಸಲಾಯಿಸಿ ಬೈಕಿನಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ಜ್ಯೂಸ್ ನೊಟ್ಟಿಗೆ ಮದ್ಯ ಸೇರಿಸಿ ಕುಡಿಸಿ ಬಳಿಕ ಆಕೆಯ ದುಪ್ಪಟ್ಟಾದಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದ. ಗುರುತು ಪತ್ತೆಯಾಗದಿರಲೆಂದು ಎಡಕೆನ್ನೆಯನ್ನೇ ಸುಟ್ಟು ಪರಾರಿಯಾಗಿದ್ದ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುತ್ತುರಾಜ್ನನ್ನು ಬಂಧಿಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ನಿರಂತರ ವಿಚಾರಣೆ ನಡೆದು ಮುತ್ತುರಾಜ್ನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಟಿ.ಹೆಚ್.ಲೋಲಾಕ್ಷಿ ವಾದ ಮಂಡಿಸಿದ್ದರು.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…