ಮೈಸೂರು : 36 ಜನರ ಪ್ರಾಣಕ್ಕೆ ಎರವಾದ, ಸಂತ್ರಸ್ತ ಕುಟುಂಬಗಳ ಜೀವನಕ್ಕೆ ಕೊಡಲಿಪೆಟ್ಟು ಹಾಕಿದ ಚಾಮರಾಜನಗರ ಆಕ್ಸಿಜನ್ ದುರಂತವು ಚಲನಚಿತ್ರವಾಗುವ ಹಾದಿಯಲ್ಲಿದೆ. ಇದು ಕಮರ್ಷಿಯಲ್ ಚಿತ್ರವಾಗಿ ಬೆಳ್ಳಿತೆರೆಯ ಮೇಲೆ ಬರಲಿದೆ. ಈ ಘಟನೆ ಚಿತ್ರವಾಗುತ್ತದೆ ಎಂಬುದು ಸಾರ್ವಜನಿಕರ ವಲಯದಲ್ಲಿ ಕುತೂಹಲ ಮೂಡಿಸಿದೆ.
ಸಂತ್ರಸ್ತ ಕುಟುಂಬಗಳ ನೋವು ಹೇಗಿದೆ? ಆಕ್ಸಿಜನ್ ದುರಂತದಲ್ಲಿ ನಿಜವಾಗಿ ಸಾವಿಗೀಡಾದವರ ಸಂಖ್ಯೆ ಎಷ್ಟು? ಇತ್ಯಾದಿ ಅಂಶಗಳ ಬಗ್ಗೆ ಸಿನಿಮಾ ಕಥೆ ಕೇಂದ್ರೀಕರಿಸಿದೆ ಎಂಬುದು ಚಿತ್ರದ ಸ್ಕ್ರಿಪ್ಟ್ ತಯಾರಿಸಿರುವ ಚಲನಚಿನತ್ರ ನಿರ್ದೇಶಕ ಕೇಸರಿ ಹರವೂ ಅವರ ಮಾತುಗಳು.
‘ಆಂದೋಲನ’ ದಿನಪತ್ರಿಕೆಯೊಂದಿಗೆ ವಾತನಾಡಿದ ಅವರು, 2022ರಲ್ಲಿ ಚಾಮರಾಜನಗರದ ಸುತ್ತಮುತ್ತಲಿನ ಹಲವು ಹಳ್ಳಿಗಳಲ್ಲಿ ಇರುವ ಆಕ್ಸಿಜನ್ ದುರಂತದ ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಮಾಹಿತಿಗಳನ್ನು ಸಂಗ್ರಹಿಸಿದ್ದೇನೆ. ನಾಲ್ಕೂವರೆ ದಿನಗಳ ಕಾಲ ಸುತ್ತಾಟ ನಡೆಸಿ, 16 ಪುಟಗಳ ವರದಿ ಸಿದ್ಧಪಡಿಸಿದ್ದೇನೆ. ದುರಂತದಲ್ಲಿ ಮೇಲ್ನೋಟಕ್ಕೆ ಗೋಚರಿಸದ ಒಳಸುಳಿಗಳೂ ಇವೆ. ಅಂದು ಇದ್ದ ಸರ್ಕಾರದ ಬಗ್ಗೆ ವಾತನಾಡಲು ನೊಂದ ಕುಟುಂಬಗಳವರಲ್ಲಿ ಹಿಂಜರಿಕೆ ಕಂಡುಬಂದಿತ್ತು. ದುರಂತ ಕುರಿತ ಸಿನಿಮಾ ಮಾಡುವ ಉದ್ದೇಶದಿಂದಲೇ ಅಲ್ಲಿಗೆ ಭೇಟಿ ನೀಡಿದ್ದೆ ಎಂದರು.
ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 2021ರ ಮೇ 3ರಿಂದ 5ರವರೆಗೆ ಆಕ್ಸಿಜನ್ ವ್ಯತ್ಯಯದಿಂದ 36 ಮಂದಿ ಅಸುನೀಗಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವರದಿ ನೀಡಿದೆ. ಅದು ಸರಿ. ಆದರೆ, 2021ರ ಮೇ 7ರವರೆಗೂ ಸಾವಿನ ‘ಮೆರವಣಿಗೆ’ ಮುಂದುವರಿದಿದ್ದು, ಹೆಚ್ಚುವರಿಯಾಗಿ ಇನ್ನೂ 26 ಅಮಾಯಕರು ಜೀವ ಕಳೆದುಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಹಾಗಾಗಿ ಹೊರಗೆ ಬಾರದಿರುವ ನೈಜ ಅಂಶಗಳ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಸಿನಿಮಾ ಕಥೆ ಸಾಗಲಿದೆ ಎಂದು ಹರವೂ ವಿವರಿಸಿದರು.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…