ಚಾಮರಾಜನಗರ

ಬೆಳ್ಳಿತೆರೆಯತ್ತ ಚಾಮರಾಜನಗರ ಆಕ್ಸಿಜನ್ ದುರಂತ

ಮೈಸೂರು : 36 ಜನರ ಪ್ರಾಣಕ್ಕೆ ಎರವಾದ, ಸಂತ್ರಸ್ತ ಕುಟುಂಬಗಳ ಜೀವನಕ್ಕೆ ಕೊಡಲಿಪೆಟ್ಟು ಹಾಕಿದ ಚಾಮರಾಜನಗರ ಆಕ್ಸಿಜನ್ ದುರಂತವು ಚಲನಚಿತ್ರವಾಗುವ ಹಾದಿಯಲ್ಲಿದೆ. ಇದು ಕಮರ್ಷಿಯಲ್ ಚಿತ್ರವಾಗಿ ಬೆಳ್ಳಿತೆರೆಯ ಮೇಲೆ ಬರಲಿದೆ. ಈ ಘಟನೆ ಚಿತ್ರವಾಗುತ್ತದೆ ಎಂಬುದು ಸಾರ್ವಜನಿಕರ ವಲಯದಲ್ಲಿ ಕುತೂಹಲ ಮೂಡಿಸಿದೆ.
ಸಂತ್ರಸ್ತ ಕುಟುಂಬಗಳ ನೋವು ಹೇಗಿದೆ? ಆಕ್ಸಿಜನ್ ದುರಂತದಲ್ಲಿ ನಿಜವಾಗಿ ಸಾವಿಗೀಡಾದವರ ಸಂಖ್ಯೆ ಎಷ್ಟು? ಇತ್ಯಾದಿ ಅಂಶಗಳ ಬಗ್ಗೆ ಸಿನಿಮಾ ಕಥೆ ಕೇಂದ್ರೀಕರಿಸಿದೆ ಎಂಬುದು ಚಿತ್ರದ ಸ್ಕ್ರಿಪ್ಟ್ ತಯಾರಿಸಿರುವ ಚಲನಚಿನತ್ರ ನಿರ್ದೇಶಕ ಕೇಸರಿ ಹರವೂ ಅವರ ಮಾತುಗಳು.

‘ಆಂದೋಲನ’ ದಿನಪತ್ರಿಕೆಯೊಂದಿಗೆ ವಾತನಾಡಿದ ಅವರು, 2022ರಲ್ಲಿ ಚಾಮರಾಜನಗರದ ಸುತ್ತಮುತ್ತಲಿನ ಹಲವು ಹಳ್ಳಿಗಳಲ್ಲಿ ಇರುವ ಆಕ್ಸಿಜನ್ ದುರಂತದ ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಮಾಹಿತಿಗಳನ್ನು ಸಂಗ್ರಹಿಸಿದ್ದೇನೆ. ನಾಲ್ಕೂವರೆ ದಿನಗಳ ಕಾಲ ಸುತ್ತಾಟ ನಡೆಸಿ, 16 ಪುಟಗಳ ವರದಿ ಸಿದ್ಧಪಡಿಸಿದ್ದೇನೆ. ದುರಂತದಲ್ಲಿ ಮೇಲ್ನೋಟಕ್ಕೆ ಗೋಚರಿಸದ ಒಳಸುಳಿಗಳೂ ಇವೆ. ಅಂದು ಇದ್ದ ಸರ್ಕಾರದ ಬಗ್ಗೆ ವಾತನಾಡಲು ನೊಂದ ಕುಟುಂಬಗಳವರಲ್ಲಿ ಹಿಂಜರಿಕೆ ಕಂಡುಬಂದಿತ್ತು. ದುರಂತ ಕುರಿತ ಸಿನಿಮಾ ಮಾಡುವ ಉದ್ದೇಶದಿಂದಲೇ ಅಲ್ಲಿಗೆ ಭೇಟಿ ನೀಡಿದ್ದೆ ಎಂದರು.

ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 2021ರ ಮೇ 3ರಿಂದ 5ರವರೆಗೆ ಆಕ್ಸಿಜನ್ ವ್ಯತ್ಯಯದಿಂದ 36 ಮಂದಿ ಅಸುನೀಗಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವರದಿ ನೀಡಿದೆ. ಅದು ಸರಿ. ಆದರೆ, 2021ರ ಮೇ 7ರವರೆಗೂ ಸಾವಿನ ‘ಮೆರವಣಿಗೆ’ ಮುಂದುವರಿದಿದ್ದು, ಹೆಚ್ಚುವರಿಯಾಗಿ ಇನ್ನೂ 26 ಅಮಾಯಕರು ಜೀವ ಕಳೆದುಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಹಾಗಾಗಿ ಹೊರಗೆ ಬಾರದಿರುವ ನೈಜ ಅಂಶಗಳ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಸಿನಿಮಾ ಕಥೆ ಸಾಗಲಿದೆ ಎಂದು ಹರವೂ ವಿವರಿಸಿದರು.

lokesh

Recent Posts

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ : ಸಿಎಂ ಖಂಡನೆ, ಶಾಂತಿ-ಸೌಹಾರ್ದತೆಗೆ ಮನವಿ

ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…

1 hour ago

ಮಡಿಕೇರಿ | ಟ್ರಾಕ್ಟರ್ ಮಗುಚಿ ಕಾರ್ಮಿಕ ಸಾವು

ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…

1 hour ago

ಬುದನೂರು ಉತ್ಸವ | ಹೆಲಿಕಾಪ್ಟರ್‌ ಜಾಯ್‌ ರೈಡ್‌ಗೆ ಚಾಲನೆ

ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್‌ ಜಾಯ್‌ ರೈಡ್‌ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…

2 hours ago

ಟಾಕ್ಸಿಕ್ ಟೀಸರ್ ಬಿಡುಗಡೆ : ಡಬಲ್‌ ಲುಕ್‌ನಲ್ಲಿ ಅಬ್ಬರಿಸಿದ ರಾಕಿಂಗ್‌ ಸ್ಟಾರ್ ರಾಯ‌

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್…

2 hours ago

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

6 hours ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

6 hours ago