ಚಾಮರಾಜನಗರ

ಬೆಳ್ಳಿತೆರೆಯತ್ತ ಚಾಮರಾಜನಗರ ಆಕ್ಸಿಜನ್ ದುರಂತ

ಮೈಸೂರು : 36 ಜನರ ಪ್ರಾಣಕ್ಕೆ ಎರವಾದ, ಸಂತ್ರಸ್ತ ಕುಟುಂಬಗಳ ಜೀವನಕ್ಕೆ ಕೊಡಲಿಪೆಟ್ಟು ಹಾಕಿದ ಚಾಮರಾಜನಗರ ಆಕ್ಸಿಜನ್ ದುರಂತವು ಚಲನಚಿತ್ರವಾಗುವ ಹಾದಿಯಲ್ಲಿದೆ. ಇದು ಕಮರ್ಷಿಯಲ್ ಚಿತ್ರವಾಗಿ ಬೆಳ್ಳಿತೆರೆಯ ಮೇಲೆ ಬರಲಿದೆ. ಈ ಘಟನೆ ಚಿತ್ರವಾಗುತ್ತದೆ ಎಂಬುದು ಸಾರ್ವಜನಿಕರ ವಲಯದಲ್ಲಿ ಕುತೂಹಲ ಮೂಡಿಸಿದೆ.
ಸಂತ್ರಸ್ತ ಕುಟುಂಬಗಳ ನೋವು ಹೇಗಿದೆ? ಆಕ್ಸಿಜನ್ ದುರಂತದಲ್ಲಿ ನಿಜವಾಗಿ ಸಾವಿಗೀಡಾದವರ ಸಂಖ್ಯೆ ಎಷ್ಟು? ಇತ್ಯಾದಿ ಅಂಶಗಳ ಬಗ್ಗೆ ಸಿನಿಮಾ ಕಥೆ ಕೇಂದ್ರೀಕರಿಸಿದೆ ಎಂಬುದು ಚಿತ್ರದ ಸ್ಕ್ರಿಪ್ಟ್ ತಯಾರಿಸಿರುವ ಚಲನಚಿನತ್ರ ನಿರ್ದೇಶಕ ಕೇಸರಿ ಹರವೂ ಅವರ ಮಾತುಗಳು.

‘ಆಂದೋಲನ’ ದಿನಪತ್ರಿಕೆಯೊಂದಿಗೆ ವಾತನಾಡಿದ ಅವರು, 2022ರಲ್ಲಿ ಚಾಮರಾಜನಗರದ ಸುತ್ತಮುತ್ತಲಿನ ಹಲವು ಹಳ್ಳಿಗಳಲ್ಲಿ ಇರುವ ಆಕ್ಸಿಜನ್ ದುರಂತದ ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಮಾಹಿತಿಗಳನ್ನು ಸಂಗ್ರಹಿಸಿದ್ದೇನೆ. ನಾಲ್ಕೂವರೆ ದಿನಗಳ ಕಾಲ ಸುತ್ತಾಟ ನಡೆಸಿ, 16 ಪುಟಗಳ ವರದಿ ಸಿದ್ಧಪಡಿಸಿದ್ದೇನೆ. ದುರಂತದಲ್ಲಿ ಮೇಲ್ನೋಟಕ್ಕೆ ಗೋಚರಿಸದ ಒಳಸುಳಿಗಳೂ ಇವೆ. ಅಂದು ಇದ್ದ ಸರ್ಕಾರದ ಬಗ್ಗೆ ವಾತನಾಡಲು ನೊಂದ ಕುಟುಂಬಗಳವರಲ್ಲಿ ಹಿಂಜರಿಕೆ ಕಂಡುಬಂದಿತ್ತು. ದುರಂತ ಕುರಿತ ಸಿನಿಮಾ ಮಾಡುವ ಉದ್ದೇಶದಿಂದಲೇ ಅಲ್ಲಿಗೆ ಭೇಟಿ ನೀಡಿದ್ದೆ ಎಂದರು.

ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 2021ರ ಮೇ 3ರಿಂದ 5ರವರೆಗೆ ಆಕ್ಸಿಜನ್ ವ್ಯತ್ಯಯದಿಂದ 36 ಮಂದಿ ಅಸುನೀಗಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವರದಿ ನೀಡಿದೆ. ಅದು ಸರಿ. ಆದರೆ, 2021ರ ಮೇ 7ರವರೆಗೂ ಸಾವಿನ ‘ಮೆರವಣಿಗೆ’ ಮುಂದುವರಿದಿದ್ದು, ಹೆಚ್ಚುವರಿಯಾಗಿ ಇನ್ನೂ 26 ಅಮಾಯಕರು ಜೀವ ಕಳೆದುಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಹಾಗಾಗಿ ಹೊರಗೆ ಬಾರದಿರುವ ನೈಜ ಅಂಶಗಳ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಸಿನಿಮಾ ಕಥೆ ಸಾಗಲಿದೆ ಎಂದು ಹರವೂ ವಿವರಿಸಿದರು.

lokesh

Recent Posts

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…

22 mins ago

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರ ನಿಷೇಧ ಕಾನೂನು ಸ್ವಾಗತಾರ್ಹ

ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…

25 mins ago

ಓದುಗರ ಪತ್ರ:  ‘ರಾಮ ಜಪ’ ಮಸೂದೆ ತಿರಸ್ಕರಿಸಿ

ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ.…

28 mins ago

‘ಮಾದಾರಿ ಮಾದಯ್ಯ’ ವರ್ತಮಾನದ ಅವಶ್ಯ ರಂಗ ಪ್ರಯೋಗ

ಮಹದೇವ ಶಂಕನಪುರ ಎಚ್.ಎಸ್.ಶಿವಪ್ರಕಾಶ್ ಅವರ ನಾಟಕ ‘ಮಾದಾರಿ ಮಾದಯ್ಯ’ ಕಳೆದ ೩೫ ವರ್ಷಗಳಿಂದಲೂ ಕನ್ನಡ ನೆಲದಲ್ಲಿ ಅಭಿನಯಿಸಲ್ಪಡುತ್ತಿದೆ. ಮೊದಲಿಗೆ ೧೯೯೦ರಲ್ಲಿ…

1 hour ago

ಅಯೋಧ್ಯೆಯಲ್ಲಿ ಗಣಪತಿ ಆಶ್ರಮ ಶಾಖೆ ಉದ್ಘಾಟನಾ ಕಾರ್ಯಕ್ರಮ

ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…

4 hours ago

ಜನವರಿ.5ಕ್ಕೆ ಮೈಸೂರು ವಿವಿ 106ನೇ ಘಟಿಕೋತ್ಸವ

ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…

4 hours ago