ಮೈಸೂರು : 36 ಜನರ ಪ್ರಾಣಕ್ಕೆ ಎರವಾದ, ಸಂತ್ರಸ್ತ ಕುಟುಂಬಗಳ ಜೀವನಕ್ಕೆ ಕೊಡಲಿಪೆಟ್ಟು ಹಾಕಿದ ಚಾಮರಾಜನಗರ ಆಕ್ಸಿಜನ್ ದುರಂತವು ಚಲನಚಿತ್ರವಾಗುವ ಹಾದಿಯಲ್ಲಿದೆ. ಇದು ಕಮರ್ಷಿಯಲ್ ಚಿತ್ರವಾಗಿ ಬೆಳ್ಳಿತೆರೆಯ ಮೇಲೆ ಬರಲಿದೆ. ಈ ಘಟನೆ ಚಿತ್ರವಾಗುತ್ತದೆ ಎಂಬುದು ಸಾರ್ವಜನಿಕರ ವಲಯದಲ್ಲಿ ಕುತೂಹಲ ಮೂಡಿಸಿದೆ.
ಸಂತ್ರಸ್ತ ಕುಟುಂಬಗಳ ನೋವು ಹೇಗಿದೆ? ಆಕ್ಸಿಜನ್ ದುರಂತದಲ್ಲಿ ನಿಜವಾಗಿ ಸಾವಿಗೀಡಾದವರ ಸಂಖ್ಯೆ ಎಷ್ಟು? ಇತ್ಯಾದಿ ಅಂಶಗಳ ಬಗ್ಗೆ ಸಿನಿಮಾ ಕಥೆ ಕೇಂದ್ರೀಕರಿಸಿದೆ ಎಂಬುದು ಚಿತ್ರದ ಸ್ಕ್ರಿಪ್ಟ್ ತಯಾರಿಸಿರುವ ಚಲನಚಿನತ್ರ ನಿರ್ದೇಶಕ ಕೇಸರಿ ಹರವೂ ಅವರ ಮಾತುಗಳು.
‘ಆಂದೋಲನ’ ದಿನಪತ್ರಿಕೆಯೊಂದಿಗೆ ವಾತನಾಡಿದ ಅವರು, 2022ರಲ್ಲಿ ಚಾಮರಾಜನಗರದ ಸುತ್ತಮುತ್ತಲಿನ ಹಲವು ಹಳ್ಳಿಗಳಲ್ಲಿ ಇರುವ ಆಕ್ಸಿಜನ್ ದುರಂತದ ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಮಾಹಿತಿಗಳನ್ನು ಸಂಗ್ರಹಿಸಿದ್ದೇನೆ. ನಾಲ್ಕೂವರೆ ದಿನಗಳ ಕಾಲ ಸುತ್ತಾಟ ನಡೆಸಿ, 16 ಪುಟಗಳ ವರದಿ ಸಿದ್ಧಪಡಿಸಿದ್ದೇನೆ. ದುರಂತದಲ್ಲಿ ಮೇಲ್ನೋಟಕ್ಕೆ ಗೋಚರಿಸದ ಒಳಸುಳಿಗಳೂ ಇವೆ. ಅಂದು ಇದ್ದ ಸರ್ಕಾರದ ಬಗ್ಗೆ ವಾತನಾಡಲು ನೊಂದ ಕುಟುಂಬಗಳವರಲ್ಲಿ ಹಿಂಜರಿಕೆ ಕಂಡುಬಂದಿತ್ತು. ದುರಂತ ಕುರಿತ ಸಿನಿಮಾ ಮಾಡುವ ಉದ್ದೇಶದಿಂದಲೇ ಅಲ್ಲಿಗೆ ಭೇಟಿ ನೀಡಿದ್ದೆ ಎಂದರು.
ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 2021ರ ಮೇ 3ರಿಂದ 5ರವರೆಗೆ ಆಕ್ಸಿಜನ್ ವ್ಯತ್ಯಯದಿಂದ 36 ಮಂದಿ ಅಸುನೀಗಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವರದಿ ನೀಡಿದೆ. ಅದು ಸರಿ. ಆದರೆ, 2021ರ ಮೇ 7ರವರೆಗೂ ಸಾವಿನ ‘ಮೆರವಣಿಗೆ’ ಮುಂದುವರಿದಿದ್ದು, ಹೆಚ್ಚುವರಿಯಾಗಿ ಇನ್ನೂ 26 ಅಮಾಯಕರು ಜೀವ ಕಳೆದುಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಹಾಗಾಗಿ ಹೊರಗೆ ಬಾರದಿರುವ ನೈಜ ಅಂಶಗಳ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಸಿನಿಮಾ ಕಥೆ ಸಾಗಲಿದೆ ಎಂದು ಹರವೂ ವಿವರಿಸಿದರು.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…