ಚಾಮರಾಜನಗರ

ಬೆಳ್ಳಿತೆರೆಯತ್ತ ಚಾಮರಾಜನಗರ ಆಕ್ಸಿಜನ್ ದುರಂತ

ಮೈಸೂರು : 36 ಜನರ ಪ್ರಾಣಕ್ಕೆ ಎರವಾದ, ಸಂತ್ರಸ್ತ ಕುಟುಂಬಗಳ ಜೀವನಕ್ಕೆ ಕೊಡಲಿಪೆಟ್ಟು ಹಾಕಿದ ಚಾಮರಾಜನಗರ ಆಕ್ಸಿಜನ್ ದುರಂತವು ಚಲನಚಿತ್ರವಾಗುವ ಹಾದಿಯಲ್ಲಿದೆ. ಇದು ಕಮರ್ಷಿಯಲ್ ಚಿತ್ರವಾಗಿ ಬೆಳ್ಳಿತೆರೆಯ ಮೇಲೆ ಬರಲಿದೆ. ಈ ಘಟನೆ ಚಿತ್ರವಾಗುತ್ತದೆ ಎಂಬುದು ಸಾರ್ವಜನಿಕರ ವಲಯದಲ್ಲಿ ಕುತೂಹಲ ಮೂಡಿಸಿದೆ.
ಸಂತ್ರಸ್ತ ಕುಟುಂಬಗಳ ನೋವು ಹೇಗಿದೆ? ಆಕ್ಸಿಜನ್ ದುರಂತದಲ್ಲಿ ನಿಜವಾಗಿ ಸಾವಿಗೀಡಾದವರ ಸಂಖ್ಯೆ ಎಷ್ಟು? ಇತ್ಯಾದಿ ಅಂಶಗಳ ಬಗ್ಗೆ ಸಿನಿಮಾ ಕಥೆ ಕೇಂದ್ರೀಕರಿಸಿದೆ ಎಂಬುದು ಚಿತ್ರದ ಸ್ಕ್ರಿಪ್ಟ್ ತಯಾರಿಸಿರುವ ಚಲನಚಿನತ್ರ ನಿರ್ದೇಶಕ ಕೇಸರಿ ಹರವೂ ಅವರ ಮಾತುಗಳು.

‘ಆಂದೋಲನ’ ದಿನಪತ್ರಿಕೆಯೊಂದಿಗೆ ವಾತನಾಡಿದ ಅವರು, 2022ರಲ್ಲಿ ಚಾಮರಾಜನಗರದ ಸುತ್ತಮುತ್ತಲಿನ ಹಲವು ಹಳ್ಳಿಗಳಲ್ಲಿ ಇರುವ ಆಕ್ಸಿಜನ್ ದುರಂತದ ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಮಾಹಿತಿಗಳನ್ನು ಸಂಗ್ರಹಿಸಿದ್ದೇನೆ. ನಾಲ್ಕೂವರೆ ದಿನಗಳ ಕಾಲ ಸುತ್ತಾಟ ನಡೆಸಿ, 16 ಪುಟಗಳ ವರದಿ ಸಿದ್ಧಪಡಿಸಿದ್ದೇನೆ. ದುರಂತದಲ್ಲಿ ಮೇಲ್ನೋಟಕ್ಕೆ ಗೋಚರಿಸದ ಒಳಸುಳಿಗಳೂ ಇವೆ. ಅಂದು ಇದ್ದ ಸರ್ಕಾರದ ಬಗ್ಗೆ ವಾತನಾಡಲು ನೊಂದ ಕುಟುಂಬಗಳವರಲ್ಲಿ ಹಿಂಜರಿಕೆ ಕಂಡುಬಂದಿತ್ತು. ದುರಂತ ಕುರಿತ ಸಿನಿಮಾ ಮಾಡುವ ಉದ್ದೇಶದಿಂದಲೇ ಅಲ್ಲಿಗೆ ಭೇಟಿ ನೀಡಿದ್ದೆ ಎಂದರು.

ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 2021ರ ಮೇ 3ರಿಂದ 5ರವರೆಗೆ ಆಕ್ಸಿಜನ್ ವ್ಯತ್ಯಯದಿಂದ 36 ಮಂದಿ ಅಸುನೀಗಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವರದಿ ನೀಡಿದೆ. ಅದು ಸರಿ. ಆದರೆ, 2021ರ ಮೇ 7ರವರೆಗೂ ಸಾವಿನ ‘ಮೆರವಣಿಗೆ’ ಮುಂದುವರಿದಿದ್ದು, ಹೆಚ್ಚುವರಿಯಾಗಿ ಇನ್ನೂ 26 ಅಮಾಯಕರು ಜೀವ ಕಳೆದುಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಹಾಗಾಗಿ ಹೊರಗೆ ಬಾರದಿರುವ ನೈಜ ಅಂಶಗಳ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಸಿನಿಮಾ ಕಥೆ ಸಾಗಲಿದೆ ಎಂದು ಹರವೂ ವಿವರಿಸಿದರು.

lokesh

Recent Posts

ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…

31 mins ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್:‌ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್‌ ರಿಪೋರ್ಟ್‌ನಲ್ಲಿ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್‌…

40 mins ago

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

2 hours ago

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

3 hours ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

4 hours ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

8 hours ago