ಚಾಮರಾಜನಗರ

ಬೆಳ್ಳಿತೆರೆಯತ್ತ ಚಾಮರಾಜನಗರ ಆಕ್ಸಿಜನ್ ದುರಂತ

ಮೈಸೂರು : 36 ಜನರ ಪ್ರಾಣಕ್ಕೆ ಎರವಾದ, ಸಂತ್ರಸ್ತ ಕುಟುಂಬಗಳ ಜೀವನಕ್ಕೆ ಕೊಡಲಿಪೆಟ್ಟು ಹಾಕಿದ ಚಾಮರಾಜನಗರ ಆಕ್ಸಿಜನ್ ದುರಂತವು ಚಲನಚಿತ್ರವಾಗುವ ಹಾದಿಯಲ್ಲಿದೆ. ಇದು ಕಮರ್ಷಿಯಲ್ ಚಿತ್ರವಾಗಿ ಬೆಳ್ಳಿತೆರೆಯ ಮೇಲೆ ಬರಲಿದೆ. ಈ ಘಟನೆ ಚಿತ್ರವಾಗುತ್ತದೆ ಎಂಬುದು ಸಾರ್ವಜನಿಕರ ವಲಯದಲ್ಲಿ ಕುತೂಹಲ ಮೂಡಿಸಿದೆ.
ಸಂತ್ರಸ್ತ ಕುಟುಂಬಗಳ ನೋವು ಹೇಗಿದೆ? ಆಕ್ಸಿಜನ್ ದುರಂತದಲ್ಲಿ ನಿಜವಾಗಿ ಸಾವಿಗೀಡಾದವರ ಸಂಖ್ಯೆ ಎಷ್ಟು? ಇತ್ಯಾದಿ ಅಂಶಗಳ ಬಗ್ಗೆ ಸಿನಿಮಾ ಕಥೆ ಕೇಂದ್ರೀಕರಿಸಿದೆ ಎಂಬುದು ಚಿತ್ರದ ಸ್ಕ್ರಿಪ್ಟ್ ತಯಾರಿಸಿರುವ ಚಲನಚಿನತ್ರ ನಿರ್ದೇಶಕ ಕೇಸರಿ ಹರವೂ ಅವರ ಮಾತುಗಳು.

‘ಆಂದೋಲನ’ ದಿನಪತ್ರಿಕೆಯೊಂದಿಗೆ ವಾತನಾಡಿದ ಅವರು, 2022ರಲ್ಲಿ ಚಾಮರಾಜನಗರದ ಸುತ್ತಮುತ್ತಲಿನ ಹಲವು ಹಳ್ಳಿಗಳಲ್ಲಿ ಇರುವ ಆಕ್ಸಿಜನ್ ದುರಂತದ ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಮಾಹಿತಿಗಳನ್ನು ಸಂಗ್ರಹಿಸಿದ್ದೇನೆ. ನಾಲ್ಕೂವರೆ ದಿನಗಳ ಕಾಲ ಸುತ್ತಾಟ ನಡೆಸಿ, 16 ಪುಟಗಳ ವರದಿ ಸಿದ್ಧಪಡಿಸಿದ್ದೇನೆ. ದುರಂತದಲ್ಲಿ ಮೇಲ್ನೋಟಕ್ಕೆ ಗೋಚರಿಸದ ಒಳಸುಳಿಗಳೂ ಇವೆ. ಅಂದು ಇದ್ದ ಸರ್ಕಾರದ ಬಗ್ಗೆ ವಾತನಾಡಲು ನೊಂದ ಕುಟುಂಬಗಳವರಲ್ಲಿ ಹಿಂಜರಿಕೆ ಕಂಡುಬಂದಿತ್ತು. ದುರಂತ ಕುರಿತ ಸಿನಿಮಾ ಮಾಡುವ ಉದ್ದೇಶದಿಂದಲೇ ಅಲ್ಲಿಗೆ ಭೇಟಿ ನೀಡಿದ್ದೆ ಎಂದರು.

ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 2021ರ ಮೇ 3ರಿಂದ 5ರವರೆಗೆ ಆಕ್ಸಿಜನ್ ವ್ಯತ್ಯಯದಿಂದ 36 ಮಂದಿ ಅಸುನೀಗಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವರದಿ ನೀಡಿದೆ. ಅದು ಸರಿ. ಆದರೆ, 2021ರ ಮೇ 7ರವರೆಗೂ ಸಾವಿನ ‘ಮೆರವಣಿಗೆ’ ಮುಂದುವರಿದಿದ್ದು, ಹೆಚ್ಚುವರಿಯಾಗಿ ಇನ್ನೂ 26 ಅಮಾಯಕರು ಜೀವ ಕಳೆದುಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಹಾಗಾಗಿ ಹೊರಗೆ ಬಾರದಿರುವ ನೈಜ ಅಂಶಗಳ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಸಿನಿಮಾ ಕಥೆ ಸಾಗಲಿದೆ ಎಂದು ಹರವೂ ವಿವರಿಸಿದರು.

lokesh

Recent Posts

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…

1 hour ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…

1 hour ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…

1 hour ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…

1 hour ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

4 hours ago

ಓದುಗರ ಪತ್ರ: ಎಸ್.ಜಾನಕಿ ಅಜರಾಮರ

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…

4 hours ago