ಚಾಮರಾಜನಗರ: ಜಿಲ್ಲೆಯ ಇದೇ ತಾಲ್ಲೂಕಿನ ಹರದನಹಳ್ಳಿ ಗ್ರಾಮದ ಬಳಿ ಬೈಕ್ಗೆ ಈಚರ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.
ಬೈಕ್ಗೆ ಈಚರ್ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ದುರ್ಮರಣವನ್ನು ಹೊಂದಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಈ ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳನ್ನು ಬ್ಯಾಡಮೂಡ್ಲು ಗ್ರಾಮದ ಅಭಿ(22) ಮತ್ತು ಅಭಿಷೇಕ್ (24) ಎಂದು ಗುರುತಿಸಲಾಗಿದೆ.
ಬಾಳೆಗೊನೆ ಕಡಿಯುವ ಕೆಲಸಗಾರರು ಇವರಾಗಿದ್ದು ಕೆಲಸ ಮುಗಿಸಿ ಹಿಂತಿರುಗುವಾಗ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಮಾದೇಶ್ ಎಂಬಾತನ ಸ್ಥಿತಿ ಗಂಭೀರವಾಗಿರುವುದರಿಂದ ಈತನನ್ನು ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇನ್ನು ಈ ಅಪಘಾತ ಬಗ್ಗೆ ಪ್ರಕರಣ ದಾಖಲಾಗಿದ್ದು, ಅಪಘಾತದ ಸ್ಥಳಕ್ಕೆ ಸಂಚಾರಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.





