ಚಾಮರಾಜನಗರ

ಚಾಮರಾಜನಗರ: ಬೈಕ್‌ಗೆ ಈಚರ್ ವಾಹನ ಡಿಕ್ಕಿ; ಸ್ಥಳದಲ್ಲೇ ಇಬ್ಬರು ಯುವಕರ ಸಾವು

ಚಾಮರಾಜನಗರ: ಜಿಲ್ಲೆಯ ಇದೇ ತಾಲ್ಲೂಕಿನ ಹರದನಹಳ್ಳಿ ಗ್ರಾಮದ ಬಳಿ ಬೈಕ್‌ಗೆ ಈಚರ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.

ಬೈಕ್‌ಗೆ ಈಚರ್‌ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ದುರ್ಮರಣವನ್ನು ಹೊಂದಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಈ ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳನ್ನು ಬ್ಯಾಡಮೂಡ್ಲು ಗ್ರಾಮದ ಅಭಿ(22) ಮತ್ತು ಅಭಿಷೇಕ್ (24) ಎಂದು ಗುರುತಿಸಲಾಗಿದೆ.

ಬಾಳೆಗೊನೆ ಕಡಿಯುವ ಕೆಲಸಗಾರರು ಇವರಾಗಿದ್ದು ಕೆಲಸ ಮುಗಿಸಿ ಹಿಂತಿರುಗುವಾಗ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಮಾದೇಶ್‌ ಎಂಬಾತನ ಸ್ಥಿತಿ ಗಂಭೀರವಾಗಿರುವುದರಿಂದ ಈತನನ್ನು ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇನ್ನು ಈ ಅಪಘಾತ ಬಗ್ಗೆ ಪ್ರಕರಣ ದಾಖಲಾಗಿದ್ದು, ಅಪಘಾತದ ಸ್ಥಳಕ್ಕೆ ಸಂಚಾರಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

8 mins ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

26 mins ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

32 mins ago

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

1 day ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

1 day ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

1 day ago