ಚಾಮರಾಜನಗರ

ಚಾಮರಾಜನಗರ: ಪೊಲೀಸರಿಂದ ತಪ್ಪಿಸಕೊಂಡಿದ್ದ ವಿಚಾರಣಾ ಖೈದಿ ಬಂಧನ

ಚಾಮರಾಜನಗರ : ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ತಪ್ಪಿಸಿಕೊಂಡಿದ್ದ ವಿಚಾರಣಾ ಕೈದಿ ಮಹಿಳೆಯರ ಪರ್ಸ್ ಕದಿಯಲು ಹೋಗಿ ಸಿಕ್ಕಿ ಬಿದ್ದಿರುವ ಘಟನೆ ಚಾಮರಾಜನಗರ ಸಮೀಪದ ಕೌಲಂದೆ ರೈಲ್ವೆ ನಿಲ್ದಾಣದಲ್ಲಿ ವರದಿಯಾಗಿದೆ.

ಚಾಮರಾಜನಗರ ತಾಲೂಕಿನ ಸುರೇಶ್(30) ಪೊಲೀಸರ ಕೈಗೆ ಸಿಕ್ಕಿಬಿದ್ದ ವಿಚಾರಣಾ ಕೈದಿಯಾಗಿದ್ದು, ತಪ್ಪಿಸಿಕೊಂಡ 24 ತಾಸಲ್ಲೇ ಮತ್ತೆ ಪೊಲೀಸರಿಗೆ ಬಲೆಗೆ ಬಿದ್ದಿದ್ದಾನೆ.

ಘಟನೆ ವಿವರ : ಕೆಲ ದಿನಗಳ ಹಿಂದೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಸುರೇಶ್​​ ​ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ತಮಿಳುನಾಡು ಸತ್ಯಮಂಗಲಂನ ನ್ಯಾಯಾಲಯಕ್ಕೆ ಶುಕ್ರವಾರ ವಿಚಾರಣೆಗೆ ಕರೆದೊಯ್ಯುವಾಗ ಹಾಸನೂರಿನ ಹೋಟೆಲ್​ ಬಳಿ ಪೊಲೀಸರನ್ನು ನೂಕಿ ಪರಾರಿಯಾಗಿದ್ದನು. ಆ ವೇಳೆ, ಪೊಲೀಸ್ ಸಿಬ್ಬಂದಿಗಳಾದ ಶಿವಾಜಿ ಅವರ ಕಿರುಬೆರಳು ಮುರಿದು, ಕಾಲುಗಳಿಗೆ ಗಾಯವಾಗಿತ್ತು. ವೀರಭದ್ರ ಎಂಬವರಿಗೆ ತರಚಿದ ಗಾಯಗಳಾಗಿತ್ತು. ಪೊಲೀಸರಿಂದ ತಪ್ಪಿಸಿಕೊಂಡ ಈತ ಪೊದೆಗಳ ಒಳಕ್ಕೆ ನುಗ್ಗಿ ಕಣ್ತಪ್ಪಿಸಿಕೊಂಡಿದ್ದ ಎನ್ನಲಾಗಿದೆ.

ರೈಲಿನಲ್ಲಿ ಬಲೆಗೆ ಬಿದ್ದ ಕೈದಿ : ಕೈಗೆ ಹಾಕಲಾಗಿದ್ದ ಬೇಡಿಯನ್ನು ಕಲ್ಲಿನಿಂದ ಜಜ್ಜಿಕೊಂಡು ಬೇಡಿ ಕಳಚಿಕೊಂಡು, ಹಾಕಿದ್ದ ಬಿಳಿ ಬಟ್ಟೆಯನ್ನು ಕಳಚಿ ಚಾಮರಾಜನಗರಕ್ಕೆ ಬಂದಿದ್ದಾನೆ ಎನ್ನಲಾಗಿದೆ.

ಚಾಮರಾಜನಗರದಿಂದ ನಂಜನಗೂಡಿಗೆ ನಿನ್ನೆ ರಾತ್ರಿ ರೈಲಿನಲ್ಲಿ ಹೋಗಿದ್ದ ಈತ, ಇಂದು ನಂಜನಗೂಡಿನಿಂದ ವಾಪಸ್ ಚಾಮರಾಜನಗರಕ್ಕೆ ಬರುವಾಗ ಮಹಿಳಾ ಬೋಗಿಯನ್ನು ಏರಿ ಪರ್ಸ್ ಕದಿಯಲು ಯತ್ನಿಸಿದಾಗ ಅಲ್ಲೇ ಇದ್ದ ಸಹ ಪ್ರಯಾಣಿಕರು ಈತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.

ನಾಪತ್ತೆಯಾಗಿದ್ದ ಕೈದಿಯ ಪ್ರಕರಣ ಸುಖಾಂತ್ಯಗೊಂಡಿದ್ದು, ಚಾಮರಾಜನಗರ ಗ್ರಾಮಾಂತರ ಠಾಣಾ ಪೊಲೀಸರು ಸುರೇಶ್​ನ ಆರೋಗ್ಯ ತಪಾಸಣೆಗೊಳಿಸಿ ಸತ್ಯಮಂಗಲಂ ನ್ಯಾಯಾಲಯ ವಶಕ್ಕೆ ಕೊಡಲು ತೆರಳಿದ್ದಾರೆ.

ಇಬ್ಬರು ಪೊಲೀಸರಿಗೆ ಅಮಾನತು ಶಿಕ್ಷೆ : ವಿಚಾರಣಾ ಕೈದಿ ತಪ್ಪಿಸಿಕೊಂಡಿದ್ದ ಹಿನ್ನೆಲೆ ಮೀಸಲು ಪಡೆಯ ವೀರಭದ್ರ ಹಾಗೂ ಶಿವಾಜಿ ಎಂಬವರನ್ನು ಅಮಾನತುಗೊಳಿಸಿ ಚಾಮರಾಜನಗರ ಎಸ್ಪಿ ಆದೇಶ ಹೊರಡಿಸಿದ್ದಾರೆ. ಕರ್ತವ್ಯಲೋಪ ಹಿನ್ನೆಲೆ ಇಬ್ಬರ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಇಲಾಖಾ ವಿಚಾರಣೆಗೆ ಸೂಚಿಸಿದ್ದಾರೆ.

ಆರೋಪಿತನ ವಿರುದ್ಧ ದಾಖಲಾಗಿರುವ ಪ್ರಕರಣಗಳು : ಬಂಧಿತ ಆರೋಪಿ ದೇವಾಲಯ ಹುಂಡಿ ಕಳವು, ದರೋಡೆ ಸೇರಿದಂತೆ ಚಾಮರಾಜನಗರ ಗ್ರಾಮಾಂತರ ಠಾಣೆ, ಪೂರ್ವ ಠಾಣೆ ವ್ಯಾಪ್ತಿಯಲ್ಲಿ ಈತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು. ಅದೇ ರೀತಿ, ತಮಿಳುನಾಡಿನ ಈರೋಡ್ ಜಿಲ್ಲಾ ವ್ಯಾಪ್ತಿಯಲ್ಲೂ ಈತನ ವಿರುದ್ಧ ಕಳವು ಪ್ರಕರಣಗಳು ದಾಖಲಾಗಿವೆ.

andolanait

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

2 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

2 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

2 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

3 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

4 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

4 hours ago