ಚಾಮರಾಜನಗರ

ಚಾಮರಾಜನಗರ: ಪೊಲೀಸರಿಂದ ತಪ್ಪಿಸಕೊಂಡಿದ್ದ ವಿಚಾರಣಾ ಖೈದಿ ಬಂಧನ

ಚಾಮರಾಜನಗರ : ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ತಪ್ಪಿಸಿಕೊಂಡಿದ್ದ ವಿಚಾರಣಾ ಕೈದಿ ಮಹಿಳೆಯರ ಪರ್ಸ್ ಕದಿಯಲು ಹೋಗಿ ಸಿಕ್ಕಿ ಬಿದ್ದಿರುವ ಘಟನೆ ಚಾಮರಾಜನಗರ ಸಮೀಪದ ಕೌಲಂದೆ ರೈಲ್ವೆ ನಿಲ್ದಾಣದಲ್ಲಿ ವರದಿಯಾಗಿದೆ.

ಚಾಮರಾಜನಗರ ತಾಲೂಕಿನ ಸುರೇಶ್(30) ಪೊಲೀಸರ ಕೈಗೆ ಸಿಕ್ಕಿಬಿದ್ದ ವಿಚಾರಣಾ ಕೈದಿಯಾಗಿದ್ದು, ತಪ್ಪಿಸಿಕೊಂಡ 24 ತಾಸಲ್ಲೇ ಮತ್ತೆ ಪೊಲೀಸರಿಗೆ ಬಲೆಗೆ ಬಿದ್ದಿದ್ದಾನೆ.

ಘಟನೆ ವಿವರ : ಕೆಲ ದಿನಗಳ ಹಿಂದೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಸುರೇಶ್​​ ​ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ತಮಿಳುನಾಡು ಸತ್ಯಮಂಗಲಂನ ನ್ಯಾಯಾಲಯಕ್ಕೆ ಶುಕ್ರವಾರ ವಿಚಾರಣೆಗೆ ಕರೆದೊಯ್ಯುವಾಗ ಹಾಸನೂರಿನ ಹೋಟೆಲ್​ ಬಳಿ ಪೊಲೀಸರನ್ನು ನೂಕಿ ಪರಾರಿಯಾಗಿದ್ದನು. ಆ ವೇಳೆ, ಪೊಲೀಸ್ ಸಿಬ್ಬಂದಿಗಳಾದ ಶಿವಾಜಿ ಅವರ ಕಿರುಬೆರಳು ಮುರಿದು, ಕಾಲುಗಳಿಗೆ ಗಾಯವಾಗಿತ್ತು. ವೀರಭದ್ರ ಎಂಬವರಿಗೆ ತರಚಿದ ಗಾಯಗಳಾಗಿತ್ತು. ಪೊಲೀಸರಿಂದ ತಪ್ಪಿಸಿಕೊಂಡ ಈತ ಪೊದೆಗಳ ಒಳಕ್ಕೆ ನುಗ್ಗಿ ಕಣ್ತಪ್ಪಿಸಿಕೊಂಡಿದ್ದ ಎನ್ನಲಾಗಿದೆ.

ರೈಲಿನಲ್ಲಿ ಬಲೆಗೆ ಬಿದ್ದ ಕೈದಿ : ಕೈಗೆ ಹಾಕಲಾಗಿದ್ದ ಬೇಡಿಯನ್ನು ಕಲ್ಲಿನಿಂದ ಜಜ್ಜಿಕೊಂಡು ಬೇಡಿ ಕಳಚಿಕೊಂಡು, ಹಾಕಿದ್ದ ಬಿಳಿ ಬಟ್ಟೆಯನ್ನು ಕಳಚಿ ಚಾಮರಾಜನಗರಕ್ಕೆ ಬಂದಿದ್ದಾನೆ ಎನ್ನಲಾಗಿದೆ.

ಚಾಮರಾಜನಗರದಿಂದ ನಂಜನಗೂಡಿಗೆ ನಿನ್ನೆ ರಾತ್ರಿ ರೈಲಿನಲ್ಲಿ ಹೋಗಿದ್ದ ಈತ, ಇಂದು ನಂಜನಗೂಡಿನಿಂದ ವಾಪಸ್ ಚಾಮರಾಜನಗರಕ್ಕೆ ಬರುವಾಗ ಮಹಿಳಾ ಬೋಗಿಯನ್ನು ಏರಿ ಪರ್ಸ್ ಕದಿಯಲು ಯತ್ನಿಸಿದಾಗ ಅಲ್ಲೇ ಇದ್ದ ಸಹ ಪ್ರಯಾಣಿಕರು ಈತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.

ನಾಪತ್ತೆಯಾಗಿದ್ದ ಕೈದಿಯ ಪ್ರಕರಣ ಸುಖಾಂತ್ಯಗೊಂಡಿದ್ದು, ಚಾಮರಾಜನಗರ ಗ್ರಾಮಾಂತರ ಠಾಣಾ ಪೊಲೀಸರು ಸುರೇಶ್​ನ ಆರೋಗ್ಯ ತಪಾಸಣೆಗೊಳಿಸಿ ಸತ್ಯಮಂಗಲಂ ನ್ಯಾಯಾಲಯ ವಶಕ್ಕೆ ಕೊಡಲು ತೆರಳಿದ್ದಾರೆ.

ಇಬ್ಬರು ಪೊಲೀಸರಿಗೆ ಅಮಾನತು ಶಿಕ್ಷೆ : ವಿಚಾರಣಾ ಕೈದಿ ತಪ್ಪಿಸಿಕೊಂಡಿದ್ದ ಹಿನ್ನೆಲೆ ಮೀಸಲು ಪಡೆಯ ವೀರಭದ್ರ ಹಾಗೂ ಶಿವಾಜಿ ಎಂಬವರನ್ನು ಅಮಾನತುಗೊಳಿಸಿ ಚಾಮರಾಜನಗರ ಎಸ್ಪಿ ಆದೇಶ ಹೊರಡಿಸಿದ್ದಾರೆ. ಕರ್ತವ್ಯಲೋಪ ಹಿನ್ನೆಲೆ ಇಬ್ಬರ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಇಲಾಖಾ ವಿಚಾರಣೆಗೆ ಸೂಚಿಸಿದ್ದಾರೆ.

ಆರೋಪಿತನ ವಿರುದ್ಧ ದಾಖಲಾಗಿರುವ ಪ್ರಕರಣಗಳು : ಬಂಧಿತ ಆರೋಪಿ ದೇವಾಲಯ ಹುಂಡಿ ಕಳವು, ದರೋಡೆ ಸೇರಿದಂತೆ ಚಾಮರಾಜನಗರ ಗ್ರಾಮಾಂತರ ಠಾಣೆ, ಪೂರ್ವ ಠಾಣೆ ವ್ಯಾಪ್ತಿಯಲ್ಲಿ ಈತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು. ಅದೇ ರೀತಿ, ತಮಿಳುನಾಡಿನ ಈರೋಡ್ ಜಿಲ್ಲಾ ವ್ಯಾಪ್ತಿಯಲ್ಲೂ ಈತನ ವಿರುದ್ಧ ಕಳವು ಪ್ರಕರಣಗಳು ದಾಖಲಾಗಿವೆ.

andolanait

Recent Posts

ಕೋಚಿಂಗ್ ಮಾಫಿಯಾಕ್ಕೆ NEET ಬಲಿ…!

ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…

51 mins ago

ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರ ವಿಶ್ವಾಸ ಉಳಿಸಿಕೊಳ್ಳಬೇಕಿದೆ ಎನ್‌ಟಿಎ

ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…

57 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಿಲ್ಲಿಯ ಅಂಗಳಕ್ಕೆ ತಲುಪಿದ ಅಧಿಕಾರ ಹಂಚಿಕೆ ಮಾತು

ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…

1 hour ago

ಪಾರಂಪರಿಕ ಕಟ್ಟಡ ಸಂರಕ್ಷಿಸಿ.. ಪರಂಪರೆ ಉಳಿಸಿ..!

ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತ ‘ಆಂದೋಲನ’ ಲೇಖನ ಸರಣಿಗೆ ಸಾರ್ವಜನಿಕರ ಮೆಚ್ಚುಗೆ ಮೈಸೂರು: ಅರಮನೆ ನಗರಿಯ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು…

1 hour ago

27ನೇ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಅಜ್ಜಿಕುಟ್ಟಿರ ನೇತೃತ್ವ

ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…

4 hours ago

ಕಬಿನಿ ಹಿನ್ನೀರಿಗೆ ಹಿಂಡು ಹಿಂಡಾಗಿ ವನ್ಯಪ್ರಾಣಿಗಳ ಲಗ್ಗೆ

ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…

4 hours ago