ಚಾಮರಾಜನಗರ: ಹೊಸ ವರ್ಷ ಪ್ರಯುಕ್ತ ನೂರಾರು ಪ್ರವಾಸಿಗರು ನೆರೆಯ ಪ್ರೇಕ್ಷಣೀಯ ಸ್ಥಳಗಳಿಗೆ ದೌಡಾಯಿಸುವುದು ಸಾಮಾನ್ಯವೇ. ಅದರಂತೆಯೇ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹಿಮವದ್ ಗೋಪಾಲಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದವರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ.
ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ದೇವಾಲಯಕ್ಕೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಭೇಟಿ ಕೊಟ್ಟು ಹಿಮವದ್ ಗೋಪಾಲಸ್ವಾಮಿ ದರ್ಶನ ಪಡೆದ ಬಳಿಕ ಸಫಾರಿ ಮಾಡಿ ಸಂಭ್ರಮಿಸಿರುವ ಪ್ರವಾಸಿಗರು.
ಹೊಸ ವರ್ಷ ಹಿನ್ನಲೆ ಪರಿಸರ ಪ್ರೇಮಿಗಳು ಬಂಡೀಪುರಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ ಪರಿಣಾಮವಾಗಿ ಪ್ರವಾಸಿಗರಿಂದ ಬಂಡೀಪುರ ಫುಲ್ ರಶ್ ಆಗಿತ್ತು. ಆದ್ರೆ ವಾಹನಗಳಿಲ್ಲದೆ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಇನ್ನು ಕೇವಲ ಜಿಲ್ಲೆ ಹೊರ ಜಿಲ್ಲೆ ಅಷ್ಟೇ ಅಲ್ಲದೆ ಹೊರ ರಾಜ್ಯಗಳಿಂದಲೂ ಪ್ರವಾಸಿಗರು ಆಗಮಿಸಿದ ಕಾರಣ ಬಂಡೀಪುರ ಸಫಾರಿ ಕೇಂದ್ರದ ಪಾರ್ಕಿಂಗ್ ಹೌಸ್ ಫುಲ್ ಆಗಿತ್ತು ಇದರಿಂದ ಸಫಾರಿ ಕೇಂದ್ರದ ಕಲೆಕ್ಷನ್ ಒಂದು ಪಟ್ಟು ಹೆಚ್ಚಾಗಿತ್ತು.
ಒಟ್ಟಾರೆ ಹೊಸ ವರ್ಷದ ಸಂಭ್ರಮದ ಹಿನ್ನಲೆ ಪ್ರವಾಸಿ ತಾಣಗಳು ಹಾಗೂ ದೇವಾಲಯಗಳು ಪ್ರವಾಸಿಗರಿಂದ ಕಿಕ್ಕಿರಿದು ತುಂಬಿದ್ದು ಶಕ್ತಿ ಯೋಜನೆ ಜಾರಿ ಹಿನ್ನಲೆ ಈ ಭಾರಿ ಎಲ್ಲಾ ಪ್ರವಾಸಿ ತಾಣಗಳಲ್ಲಿಯೂ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಿದ್ದು ವಿಶೇಷ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…