ಚಾಮರಾಜನಗರ: ಹೊಸ ವರ್ಷ ಪ್ರಯುಕ್ತ ನೂರಾರು ಪ್ರವಾಸಿಗರು ನೆರೆಯ ಪ್ರೇಕ್ಷಣೀಯ ಸ್ಥಳಗಳಿಗೆ ದೌಡಾಯಿಸುವುದು ಸಾಮಾನ್ಯವೇ. ಅದರಂತೆಯೇ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹಿಮವದ್ ಗೋಪಾಲಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದವರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ.
ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ದೇವಾಲಯಕ್ಕೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಭೇಟಿ ಕೊಟ್ಟು ಹಿಮವದ್ ಗೋಪಾಲಸ್ವಾಮಿ ದರ್ಶನ ಪಡೆದ ಬಳಿಕ ಸಫಾರಿ ಮಾಡಿ ಸಂಭ್ರಮಿಸಿರುವ ಪ್ರವಾಸಿಗರು.
ಹೊಸ ವರ್ಷ ಹಿನ್ನಲೆ ಪರಿಸರ ಪ್ರೇಮಿಗಳು ಬಂಡೀಪುರಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ ಪರಿಣಾಮವಾಗಿ ಪ್ರವಾಸಿಗರಿಂದ ಬಂಡೀಪುರ ಫುಲ್ ರಶ್ ಆಗಿತ್ತು. ಆದ್ರೆ ವಾಹನಗಳಿಲ್ಲದೆ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಇನ್ನು ಕೇವಲ ಜಿಲ್ಲೆ ಹೊರ ಜಿಲ್ಲೆ ಅಷ್ಟೇ ಅಲ್ಲದೆ ಹೊರ ರಾಜ್ಯಗಳಿಂದಲೂ ಪ್ರವಾಸಿಗರು ಆಗಮಿಸಿದ ಕಾರಣ ಬಂಡೀಪುರ ಸಫಾರಿ ಕೇಂದ್ರದ ಪಾರ್ಕಿಂಗ್ ಹೌಸ್ ಫುಲ್ ಆಗಿತ್ತು ಇದರಿಂದ ಸಫಾರಿ ಕೇಂದ್ರದ ಕಲೆಕ್ಷನ್ ಒಂದು ಪಟ್ಟು ಹೆಚ್ಚಾಗಿತ್ತು.
ಒಟ್ಟಾರೆ ಹೊಸ ವರ್ಷದ ಸಂಭ್ರಮದ ಹಿನ್ನಲೆ ಪ್ರವಾಸಿ ತಾಣಗಳು ಹಾಗೂ ದೇವಾಲಯಗಳು ಪ್ರವಾಸಿಗರಿಂದ ಕಿಕ್ಕಿರಿದು ತುಂಬಿದ್ದು ಶಕ್ತಿ ಯೋಜನೆ ಜಾರಿ ಹಿನ್ನಲೆ ಈ ಭಾರಿ ಎಲ್ಲಾ ಪ್ರವಾಸಿ ತಾಣಗಳಲ್ಲಿಯೂ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಿದ್ದು ವಿಶೇಷ.
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…