ಚಾಮರಾಜನಗರ : ಆಹಾರ ಪದಾರ್ಥ ಅರಸಿ ನಾಡಿನಿಂದ ಕಾಡಿಗೆ ಬಂದ ಕರಡಿಯೊಂದು ಶಾಲಾ ಶಿಕ್ಷಕರ ಕೊಠಡಿಯ ಬಾಗಿಲು ಮುರಿದು, ಆಃಆರ ಪದಾರ್ಥಗಳನ್ನು ತಿಂದು ಜೊತೆಗೆ ಪೀಠೋಪಕರಣಗಳನ್ನು ಮುರಿದು ಹಾಕಿರುವ ಘಟನೆ ಹನೂರು ತಾಲೂಕಿನ ಸಂದನಪಾಳ್ಯದ ಸಂತ ಅಂಥೋಣಿ ಗ್ರಾಮಾಂತರ ಫ್ರೌಢ ಶಾಲೆಯಲ್ಲಿ ಮಧ್ಯರಾತ್ರಿ ನಡೆದಿದೆ.
ಇಂದು(ಶುಕ್ರವಾರ) ಬೆಳಿಗ್ಗೆ ಮುಖ್ಯ ಶಿಕ್ಷಕ ಲೂಯಿಸ್ ಸೇನಸ್ ಅವರು ಶಾಲೆಗೆ ಬಂದಾಗ ಶಿಕ್ಷಕರ ಕೊಠಡಿಯ ಬಾಗಿಲು ಮುರಿದಿರುವುದನ್ನು ನೋಡಿದ್ದಾರೆ. ಒಳ ಹೋಗಿ ನೋಡಿದಾ ಎಲ್ಲಾ ವಸ್ತುಗಳು ಚೆಲ್ಲಾಪಿಲ್ಲಿಯಾಗಿರುವುದನ್ನು ಗಮನಿಸಿದ ಮುಖ್ಯ ಶಿಕ್ಷಕರು ಸಿಸಿ ಟಿವಿಯಲ್ಲಿ ಕರಿಡಿ ದಾಂಧಲೆ ನಡೆಸಿರುವುದು ಗೊತ್ತಾಗಿದೆ.
ತಡರಾತ್ರಿ ಸುಮಾರು ೧ ಗಂಟೆ ವೇಳೆಯಲ್ಲಿ ಕರಡಿಯೊಂದು ರೂಂ ಬಾಗಿಲು ಮುರಿದು ಒಳನುಗ್ಗಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ. ಕರಡಿ ಒಳನುಗ್ಗಿ ಅಡುಗೆ ಎಣ್ಣೆ, ಬೆಲ್ಲ ಇತ್ಯಾದಿ ಪದಾರ್ಥಗಳನ್ನು ತಿಂದು ಪೀಠೋಪಕರಣಗಳಿಗೆ ಹಾನಿ ಮಾಡಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.
ಈ ಬಗ್ಗೆ ಫಾದರ್ ಟೆನ್ನಿ ಕುರಿಯನ್ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಇಲಾಖಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆಲವು ದಿನಗಳ ಹಿಂದೆ ಅಜ್ಜಿಪುರ ಗ್ರಾಮದಲ್ಲಿನ ಅಂಗಡಿಯೊಂದಕ್ಕೆ ನುಗ್ಗಿದ್ದ ಕರಡಿ ಮೊಟ್ಟೆಗಳನ್ನು ತಿಂದು ಹಾಳು ಮಾಡಿತ್ತು. ಈ ಕರಡಿಯನ್ನು ಸೆರೆಹಿಡಿದು ಕಾಡಿಗೆ ಬಿಡಲಾಗಿತ್ತು. ಇದಾದ ಬಳಿಕವೂ ಈ ಘಟನೆ ನಡೆದಿರುವುದು ಸಾರ್ವಜನಿಕರ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರು ಕೆಲಸದ ವೇಳೆಯಲ್ಲಿ ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಸಾರ್ವಜನಿಕರು ತಮ್ಮ ಕೆಲಸಕ್ಕೆಂದು ಕಚೇರಿಗಳಿಗೆ ಹೋದರೆ…
ಎಚ್.ಡಿ.ಕೋಟೆ ತಾಲ್ಲೂಕಿನಿಂದ ಹ್ಯಾಂಡ್ಪೋಸ್ಟ್ ಮಾರ್ಗವಾಗಿ ಮಾದಾಪುರ ಕಡೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳು ಬೆಳಿಗ್ಗೆ ೬.೩೦ಕ್ಕೆ , ಮಧ್ಯಾಹ್ನ…
ಇತ್ತೀಚಿನ ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಸುಮಾರು ೩೭ ಅಂಕಗಳ ಪ್ರಶ್ನೆಗಳು ಪಠ್ಯಕ್ರಮಕ್ಕೆ ಹೊರತಾಗಿರುವುದು ಅಥವಾ ಅತೀವ ಕ್ಲಿಷ್ಟಕರವಾಗಿರುವುದು ಶಿಕ್ಷಣ ಇಲಾಖೆಯ…
ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದಿಂದಾಗಿ ಪಿಎನ್ಜಿ (ಪೈಪ್ಡ್ ನ್ಯಾಚುರಲ್ ಗ್ಯಾಸ್) ಸಂಪರ್ಕ ಹೊಂದಿದ್ದವರ ಮನೆಗಳಲ್ಲಿರುವ ಎಲ್ಪಿಜಿ ಸಿಲಿಂಡರ್ಗಳನ್ನು…
ಹೆಚ್.ಎಸ್. ದಿನೇಶ್ಕುಮಾರ್ ಚುನಾಯಿತ ಪ್ರತಿನಿಧಿಗಳಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ದರ್ಬಾರು ಮೈಸೂರು: ಜವಾಬ್ದಾರಿಯುತ ಹಾಗೂ ಜನರ ಪರ ಆಲೋಚಿಸುವ ಜನಪ್ರತಿನಿಧಿಗಳಿಲ್ಲದಿದ್ದಲ್ಲಿ ಏನೆಲ್ಲಾ…