ಚಾಮರಾಜನಗರ : ಆಹಾರ ಪದಾರ್ಥ ಅರಸಿ ನಾಡಿನಿಂದ ಕಾಡಿಗೆ ಬಂದ ಕರಡಿಯೊಂದು ಶಾಲಾ ಶಿಕ್ಷಕರ ಕೊಠಡಿಯ ಬಾಗಿಲು ಮುರಿದು, ಆಃಆರ ಪದಾರ್ಥಗಳನ್ನು ತಿಂದು ಜೊತೆಗೆ ಪೀಠೋಪಕರಣಗಳನ್ನು ಮುರಿದು ಹಾಕಿರುವ ಘಟನೆ ಹನೂರು ತಾಲೂಕಿನ ಸಂದನಪಾಳ್ಯದ ಸಂತ ಅಂಥೋಣಿ ಗ್ರಾಮಾಂತರ ಫ್ರೌಢ ಶಾಲೆಯಲ್ಲಿ ಮಧ್ಯರಾತ್ರಿ ನಡೆದಿದೆ.
ಇಂದು(ಶುಕ್ರವಾರ) ಬೆಳಿಗ್ಗೆ ಮುಖ್ಯ ಶಿಕ್ಷಕ ಲೂಯಿಸ್ ಸೇನಸ್ ಅವರು ಶಾಲೆಗೆ ಬಂದಾಗ ಶಿಕ್ಷಕರ ಕೊಠಡಿಯ ಬಾಗಿಲು ಮುರಿದಿರುವುದನ್ನು ನೋಡಿದ್ದಾರೆ. ಒಳ ಹೋಗಿ ನೋಡಿದಾ ಎಲ್ಲಾ ವಸ್ತುಗಳು ಚೆಲ್ಲಾಪಿಲ್ಲಿಯಾಗಿರುವುದನ್ನು ಗಮನಿಸಿದ ಮುಖ್ಯ ಶಿಕ್ಷಕರು ಸಿಸಿ ಟಿವಿಯಲ್ಲಿ ಕರಿಡಿ ದಾಂಧಲೆ ನಡೆಸಿರುವುದು ಗೊತ್ತಾಗಿದೆ.
ತಡರಾತ್ರಿ ಸುಮಾರು ೧ ಗಂಟೆ ವೇಳೆಯಲ್ಲಿ ಕರಡಿಯೊಂದು ರೂಂ ಬಾಗಿಲು ಮುರಿದು ಒಳನುಗ್ಗಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ. ಕರಡಿ ಒಳನುಗ್ಗಿ ಅಡುಗೆ ಎಣ್ಣೆ, ಬೆಲ್ಲ ಇತ್ಯಾದಿ ಪದಾರ್ಥಗಳನ್ನು ತಿಂದು ಪೀಠೋಪಕರಣಗಳಿಗೆ ಹಾನಿ ಮಾಡಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.
ಈ ಬಗ್ಗೆ ಫಾದರ್ ಟೆನ್ನಿ ಕುರಿಯನ್ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಇಲಾಖಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆಲವು ದಿನಗಳ ಹಿಂದೆ ಅಜ್ಜಿಪುರ ಗ್ರಾಮದಲ್ಲಿನ ಅಂಗಡಿಯೊಂದಕ್ಕೆ ನುಗ್ಗಿದ್ದ ಕರಡಿ ಮೊಟ್ಟೆಗಳನ್ನು ತಿಂದು ಹಾಳು ಮಾಡಿತ್ತು. ಈ ಕರಡಿಯನ್ನು ಸೆರೆಹಿಡಿದು ಕಾಡಿಗೆ ಬಿಡಲಾಗಿತ್ತು. ಇದಾದ ಬಳಿಕವೂ ಈ ಘಟನೆ ನಡೆದಿರುವುದು ಸಾರ್ವಜನಿಕರ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…