ಚಾಮರಾಜನಗರ: ಮದುವೆ ಕಾರ್ಯಕ್ರಮಕ್ಕೆ ಭಾಗವಹಿಸಲು ಬಂದಿದ್ದವರ ಕಾರು ಮರಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಪರಿಣಾಮ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ಭಾನುವಾರ ಮಧ್ಯರಾತ್ರಿ (1.ಗಂಟೆ) ಚಾಮರಾಜನಗರ ತಾಲೂಕಿನ ಪುಣಜನೂರು ಬಳಿ ನಡೆದಿದೆ.
ಮೈಸೂರಿನ ರಮಾಬಾಯಿ ನಗರದ ಜೀವನ್ ಹಾಗೂ ನಂದನ್ (ಇಬ್ಬರಿಗೂ 24 ವರ್ಷ) ಸ್ಥಳ ದಲ್ಲೇ ಮೃತಪಟ್ಟಿದ್ದಾರೆ.
ಉಳಿದಂತೆ ರಮಾಬಾಯಿನಗರದ ಶಶಾಂಕ್, ವಿದ್ಯಾರಣ್ಯಪುರಂನ ಧನುಷ್, ಗುಂಡ್ಲುಪೇಟೆಯ ಸುನೀಲ್ ಕುಮಾರ್ ಗಾಯಗೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರೆಲ್ಲ ಚಾಮರಾಜನಗರ ತಾಲೂಕಿನ ಬೆಜ್ಜಲಪಾಳ್ಯದಲ್ಲಿ ಇಂದು ನಡೆಯುತ್ತಿದ್ದ ಮದುವೆಗೆ ಮೈಸೂರಿನಿಂದ ಆಗಮಿಸಿದ್ದರು. ತಡ ರಾತ್ರಿ ಮದುವೆ ಮನೆಯಿಂದ ಪುಣಜನೂರಿಗೆ ತೆರಳಿ, ವಾಪಸ್ ಮದುವೆ ಮನೆಗೆ ಬರುವಾಗ ಅಪಘಾತ ನಡೆದಿದೆ.
ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಎಸ್ಪಿ ಡಾ. ಬಿ ಟಿ ಕವಿತಾ, ಎಎಸ್ಪಿ ಶಶಿಧರ್, ಡಿಎಸ್ಪಿ ಲಕ್ಷ್ಮಯ್ಯ, ಇನ್ಸ್ ಪೆಕ್ಟರ್ ನವೀನ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಕೈಲಾಶ್ ಶ್ರೇಣಿಯ ರೇಚಿನ್ ಲಾ ಪಾಸ್ನತ್ತ ಮುನ್ನುಗ್ಗುತ್ತಿರುವ ಚೀನಾದ ಟ್ಯಾಂಕ್ಗಳನ್ನು ತಡೆಯಲು ಒಂದೇ ಒಂದು ಗುಂಡು ಹಾರಿಸಿದರೂ ಆ ದೇಶದೊಂದಿಗೆ…
ಬೋಗಸ್ ಕಾರ್ಡ್ ಹೆಸರಿನಲ್ಲಿ ಕ್ರಮ; ನೈಜ ಕಾರ್ಮಿಕರಿಗೆ ಸಮಸ್ಯೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ…
ಸ್ವಾಮಿ ಪೊನ್ನಾಚಿ ದಿನಬೆಳಗಾದರೆ ಮಾದಪ್ಪ, ಮಂಟೇಸ್ವಾಮಿಯ ಹಾಡು ಹಾಡಿಕೊಂಡು ಬರುವ ಜನಪದರ ದಂಡು. ಸುತ್ತಮುತ್ತ ದೇವರಗುಡ್ಡ ನೀಲಗಾರರ ಹಿಂಡು. ಊರೂರಿ…
ರವಿ ಕೋಟಿ ಬಾಲ್ಯದಲ್ಲಿ ನಾನು ಕಂಟ್ರೋಲಿಗೆ ಬರದಷ್ಟು ತುಂಟನಾಗಿದ್ದೆ. ಯಾರೂ ನನ್ನನ್ನು ಕಂಟ್ರೋಲ್ ಮಾಡಲಾಗುತ್ತಿರಲಿಲ್ಲ. ಯಾಕೆಂದರೆ ನಾನೇ ನನ್ನ ಕಂಟ್ರೋಲಿನಲ್ಲಿ…
ಸುಕನ್ಯಾ ಕನಾರಳ್ಳಿ ಒಂದು ಮಠ. ಅಲ್ಲಿ ಮರಿಸ್ವಾಮಿಯಾಗಿದ್ದವರು ಪೀಠಾಧಿಪತಿ ತೀರಿಕೊಂಡ ಮೇಲೆ ಏನೇನೋ ಕಾರಣಗಳ ದೆಸೆಯಿಂದ ಪೀಠವನ್ನು ಏರಲು ಆಗದೆ…
ಡಾ.ಮೈಸೂರು ಉಮೇಶ್ ಸೋಬಾನೆ ಪದಗಳು ಗ್ರಾಮೀಣ ಮಹಿಳೆಯರಿಗೆ ಒಲಿದು ಬಂದಿರುವ ಜನಪದ ಗಾಯನ ಪ್ರಕಾರ. ಇದಕ್ಕೆ ಅಪವಾದವೆಂಬಂತೆ ಮಂಡ್ಯ ಜಿಲ್ಲೆಯ…