ಚಾಮರಾಜನಗರ: ಮದುವೆ ಕಾರ್ಯಕ್ರಮಕ್ಕೆ ಭಾಗವಹಿಸಲು ಬಂದಿದ್ದವರ ಕಾರು ಮರಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಪರಿಣಾಮ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ಭಾನುವಾರ ಮಧ್ಯರಾತ್ರಿ (1.ಗಂಟೆ) ಚಾಮರಾಜನಗರ ತಾಲೂಕಿನ ಪುಣಜನೂರು ಬಳಿ ನಡೆದಿದೆ.
ಮೈಸೂರಿನ ರಮಾಬಾಯಿ ನಗರದ ಜೀವನ್ ಹಾಗೂ ನಂದನ್ (ಇಬ್ಬರಿಗೂ 24 ವರ್ಷ) ಸ್ಥಳ ದಲ್ಲೇ ಮೃತಪಟ್ಟಿದ್ದಾರೆ.
ಉಳಿದಂತೆ ರಮಾಬಾಯಿನಗರದ ಶಶಾಂಕ್, ವಿದ್ಯಾರಣ್ಯಪುರಂನ ಧನುಷ್, ಗುಂಡ್ಲುಪೇಟೆಯ ಸುನೀಲ್ ಕುಮಾರ್ ಗಾಯಗೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರೆಲ್ಲ ಚಾಮರಾಜನಗರ ತಾಲೂಕಿನ ಬೆಜ್ಜಲಪಾಳ್ಯದಲ್ಲಿ ಇಂದು ನಡೆಯುತ್ತಿದ್ದ ಮದುವೆಗೆ ಮೈಸೂರಿನಿಂದ ಆಗಮಿಸಿದ್ದರು. ತಡ ರಾತ್ರಿ ಮದುವೆ ಮನೆಯಿಂದ ಪುಣಜನೂರಿಗೆ ತೆರಳಿ, ವಾಪಸ್ ಮದುವೆ ಮನೆಗೆ ಬರುವಾಗ ಅಪಘಾತ ನಡೆದಿದೆ.
ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಎಸ್ಪಿ ಡಾ. ಬಿ ಟಿ ಕವಿತಾ, ಎಎಸ್ಪಿ ಶಶಿಧರ್, ಡಿಎಸ್ಪಿ ಲಕ್ಷ್ಮಯ್ಯ, ಇನ್ಸ್ ಪೆಕ್ಟರ್ ನವೀನ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…