ಚಾಮರಾಜನಗರ: ಮದುವೆ ಕಾರ್ಯಕ್ರಮಕ್ಕೆ ಭಾಗವಹಿಸಲು ಬಂದಿದ್ದವರ ಕಾರು ಮರಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಪರಿಣಾಮ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ಭಾನುವಾರ ಮಧ್ಯರಾತ್ರಿ (1.ಗಂಟೆ) ಚಾಮರಾಜನಗರ ತಾಲೂಕಿನ ಪುಣಜನೂರು ಬಳಿ ನಡೆದಿದೆ.
ಮೈಸೂರಿನ ರಮಾಬಾಯಿ ನಗರದ ಜೀವನ್ ಹಾಗೂ ನಂದನ್ (ಇಬ್ಬರಿಗೂ 24 ವರ್ಷ) ಸ್ಥಳ ದಲ್ಲೇ ಮೃತಪಟ್ಟಿದ್ದಾರೆ.
ಉಳಿದಂತೆ ರಮಾಬಾಯಿನಗರದ ಶಶಾಂಕ್, ವಿದ್ಯಾರಣ್ಯಪುರಂನ ಧನುಷ್, ಗುಂಡ್ಲುಪೇಟೆಯ ಸುನೀಲ್ ಕುಮಾರ್ ಗಾಯಗೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರೆಲ್ಲ ಚಾಮರಾಜನಗರ ತಾಲೂಕಿನ ಬೆಜ್ಜಲಪಾಳ್ಯದಲ್ಲಿ ಇಂದು ನಡೆಯುತ್ತಿದ್ದ ಮದುವೆಗೆ ಮೈಸೂರಿನಿಂದ ಆಗಮಿಸಿದ್ದರು. ತಡ ರಾತ್ರಿ ಮದುವೆ ಮನೆಯಿಂದ ಪುಣಜನೂರಿಗೆ ತೆರಳಿ, ವಾಪಸ್ ಮದುವೆ ಮನೆಗೆ ಬರುವಾಗ ಅಪಘಾತ ನಡೆದಿದೆ.
ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಎಸ್ಪಿ ಡಾ. ಬಿ ಟಿ ಕವಿತಾ, ಎಎಸ್ಪಿ ಶಶಿಧರ್, ಡಿಎಸ್ಪಿ ಲಕ್ಷ್ಮಯ್ಯ, ಇನ್ಸ್ ಪೆಕ್ಟರ್ ನವೀನ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…