ಚಾಮರಾಜನಗರ

ಚಾ.ನಗರ | ವಿವಿಧ ಗ್ರಾ.ಪಂಚಾಯ್ತಿಗಳಿಗೆ ಸಿಇಒ ದೀಢಿರ್‌ ಭೇಟಿ

ಚಾಮರಾಜನಗರ : ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ಅವರು ದೀಢಿರ್‌ಭೇಟಿ ನೀಡಿ, ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಉದ್ಯೋಗ ಖಾತರಿ ಯೋಜನೆ, ಎನ್.ಆರ್.ಎಲ್.ಎಂ., ಸ್ವಚ್ಛ ಭಾರತ್ ಮಿಷನ್ (ಗ್ರಾ), ಜಲಜೀವನ್ ಮಿಷನ್, ವಿವಿಧ ವಸತಿ ಯೋಜನೆ, 14 ಮತ್ತು 15ನೇ ಹಣಕಾಸು ಯೋಜನೆ ಹಾಗೂ ಇತರೆ ಗ್ರಾಮೀಣಾಭಿವೃದ್ದಿ ಯೋಜನೆಗಳಡಿ ಅನುಷ್ಠಾನಗೊಳಿಸಲಾಗಿರುವ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಂಥಾಲಯ, ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಘಟಕ, ಕೂಸಿನ ಮನೆ ಕೇಂದ್ರಗಳ ಅನುಷ್ಠಾನ, ನಿರ್ವಹಣೆ ಹಾಗೂ ತೆರಿಗೆ ವಸೂಲಾತಿ ಕುರಿತಾದ ಕಡತಗಳು ಮತ್ತು ದಾಖಲಾತಿಗಳ ನಿರ್ವಹಣೆ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ಹಾಜರಾತಿಯನ್ನು ವೀಕ್ಷಿಸಿದರು.

ಮಾದಾಪುರ ಗ್ರಾಮ ಪಂಚಾಯಿತಿ ಡಿಜಿಟಲ್ ಗ್ರಂಥಾಲಯಕ್ಕೆ ಭೇಟಿ ನೀಡಿ ಗ್ರಂಥಾಲಯಕ್ಕೆ ಸದಸ್ಯತ್ವ ನೋಂದಣಿಯಾಗಿರುವ ಸದಸ್ಯರ ಸಂಖ್ಯೆ, ಗ್ರಂಥಾಲಯದಲ್ಲಿ ಸಂಗ್ರಹಿಸಲಾಗಿರುವ ಪುಸ್ತಕಗಳು, ಶಾಲಾ ಮಕ್ಕಳ ನೋಂದಣಿ, ಪುಸ್ತಕಗಳ ಸಂಗ್ರಹಣೆ ಮತ್ತು ನಿರ್ವಹಣೆ, ಗ್ರಂಥಾಲಯಕ್ಕೆ ಪ್ರತಿ ದಿನ ಭೇಟಿ ನೀಡುವವರ ಬಗ್ಗೆ ಗ್ರಂಥಾಲಯದ ಮೇಲ್ವಿಚಾರಕರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಽಕಾರಿಗಳಿಂದ ಮಾಹಿತಿ ಪಡೆದರು. ಸದಸ್ಯರ ನೋಂದಣಿ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ಸೂಚನೆ ನೀಡಿದರು.

ಗ್ರಾಮದ ಅಂಗನವಾಡಿ ಕೇಂದ್ರ-1 ಮತ್ತು ಕೇಂದ್ರ-2ಕ್ಕೆ ಭೇಟಿ ನೀಡಿ, ಅಂಗನವಾಡಿಯಲ್ಲಿ ದಾಖಲಾಗಿರುವ ಮಕ್ಕಳ ಸಂಖ್ಯೆ, ಮಕ್ಕಳು ಹಾಗೂ ಗರ್ಭಿಣಿ-ಬಾಣಂತಿಯರಿಗೆ ನೀಡುತ್ತಿರುವ ಪೌಷ್ಟಿಕ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು. ಆಹಾರ ಪದಾರ್ಥಗಳ ದಾಸ್ತಾನು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕರ ಹಾಜರಾತಿ, ದಾಸ್ತಾನು ವಹಿ ಹಾಗೂ ಇತರೆ ವೆಚ್ಚದ ವಹಿಗಳು, ಅಡುಗೆ ಕೋಣೆ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮತ್ತು ಸ್ವಚ್ಛತೆ ಕುರಿತು ಮಾಹಿತಿ ಪಡೆದರು.

ಗ್ರಾಮ ಪಂಚಾಯಿತಿ ಆವರಣದಲ್ಲಿ ಪ್ರಧಾನ ಮಂತ್ರಿಆವಾಸ್ (ಗ್ರಾ) ಯೋಜನೆಯಡಿ ನಿರ್ಮಿಸಲಾಗಿರುವ ‘ಮಾದರಿ ಮನೆ’ಗೆ ಭೇಟಿ ನೀಡಿ, ನೋಂದಣಿಯಾಗಿರುವ ಮಕ್ಕಳ ಸಂಖ್ಯೆ ಹಾಜರಾತಿ ಹಾಗೂ ನಿರ್ವಹಣಾ ಸಿಬ್ಬಂದಿಗಳ ಹಾಜರಾತಿಯನ್ನು ಪರಿಶೀಲಿಸಿದರು.

ಸಂತೇಮರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೆಳ್ಳನೂರು ಹಾಗೂ ಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡಿಯೂರು ಗ್ರಾಮಗಳಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖಾ ವತಿಯಿಂದ ಜಲಜೀವನ್ ಮಿಷನ್ ಯೋಜನೆಯಡಿ ಅನುಷ್ಟಾನಗೊಳಿಸಲಾಗಿರುವ ನಳ ಸಂಪರ್ಕ ಕಾಮಗಾರಿಗಳು ಹಾಗೂ ಕಿರು ನೀರು ಸರಬರಾಜು ಪೂರೈಕೆ ಕೇಂದ್ರಗಳನ್ನು ಖುದ್ದು ಪರಿಶೀಲಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

9 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

9 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

9 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

10 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

10 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

10 hours ago