ಚಾಮರಾಜನಗರ: ಆಷಾಢ ಮಾಸದಲ್ಲಿ ನಡೆಯುವ ರಾಜ್ಯದ ಏಕೈಕ ರಥೋತ್ಸವವಾದ ಚಾಮರಾಜನಗರದ ಚಾಮರಾಜೇಶ್ವರ ರಥೋತ್ಸವಕ್ಕೆ ಸಿದ್ಧತೆ ಆರಂಭಗೊಂಡಿದ್ದು, ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ರಥ ಕಟ್ಟುವ ಕಾರ್ಯಕ್ಕೆ ಚಾಲನೆ ಕೊಟ್ಟಿದ್ದಾರೆ.
ಆಷಾಢ ಮಾಸದಲ್ಲಿ ರಥೋತ್ಸವ ನಡೆಯುವುದು ಬಹಳ ಅಪರೂಪ ಮತ್ತು ವಿರಳ. ಆದರೆ ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಾತ್ರ ಆಷಾಢದ ಜಾತ್ರೆ ನಡೆಯಲಿದೆ. ಇದೇ ಜುಲೈ.20ರಂದು ರಥೋತ್ಸವ ನಡೆಯಲಿದ್ದು, ಸಾಂಪ್ರದಾಯಿಕವಾಗಿ ತಯಾರಿ ಆರಂಭಗೊಂಡಿದೆ.
ಚಾಮರಾಜೇಶ್ವರ ರಥೋತ್ಸವವು ನೂರಾರು ವರ್ಷಗಳಿಂದ ನಡೆದುಕೊಂಡು ಬರುತ್ತಿದ್ದು, ಇದು ದಂಪತಿಗಳ ಜಾತ್ರೆ ಅಂತಲೇ ಜನಪ್ರಿಯವಾಗಿದೆ. ಮದುವೆಯಾದ ಹೊಸತರಲ್ಲಿ ಪತ್ನಿ ತವರಿನಲ್ಲಿ ಇರುವುದರಿಂದ ಈ ಜಾತ್ರೆಯ ದಿನದಂದು ಪತಿ-ಪತ್ನಿ ಭೇಟಿಯಾಗಿ ಹಣ್ಣು ಜವನ ಎಸೆದು ಪ್ರಾರ್ಥನೆ ಸಲ್ಲಿಸುವುದು ಇಲ್ಲಿನ ವಿಶೇಷವಾಗಿದೆ.
ತೇರು ಕಟ್ಟುವ ಕಾರ್ಯದಲ್ಲಿ ನುರಿತರು ಪಾಲ್ಗೊಂಡಿದ್ದು, ಈ ಬಾರಿ ಮಳೆ ಉತ್ತಮವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಜಾತ್ರೆ ಮಾಡಲು ಭಕ್ತರು ಅಣಿಯಾಗುತ್ತಿದ್ದಾರೆ. ಈ ಜಾತ್ರೆಯಲ್ಲಿ ನವಜೋಡಿಗಳ ಕಲರವವೇ ಎಲ್ಲರ ಕೇಂದ್ರ ಬಿಂದುವಾಗಿದ್ದು, ಇದರಿಂದ ಚಾಮರಾಜನಗರದಲ್ಲಿ ಜಾತ್ರೆ ಕಳೆ ಹೆಚ್ಚಿದಂತಾಗಲಿದೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…