ಚಾಮರಾಜನಗರ

ರಾಜ್ಯದ ಏಕೈಕ ಆಷಾಢ ರಥೋತ್ಸವಕ್ಕೆ ಸಿದ್ಧತೆ ಹೇಗಿದೆ ಗೊತ್ತಾ.?

ಚಾಮರಾಜನಗರ: ಆಷಾಢ ಮಾಸದಲ್ಲಿ ನಡೆಯುವ ರಾಜ್ಯದ ಏಕೈಕ ರಥೋತ್ಸವವಾದ ಚಾಮರಾಜನಗರದ ಚಾಮರಾಜೇಶ್ವರ ರಥೋತ್ಸವಕ್ಕೆ ಸಿದ್ಧತೆ ಆರಂಭಗೊಂಡಿದ್ದು, ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ರಥ ಕಟ್ಟುವ ಕಾರ್ಯಕ್ಕೆ ಚಾಲನೆ ಕೊಟ್ಟಿದ್ದಾರೆ.

ಆಷಾಢ ಮಾಸದಲ್ಲಿ ರಥೋತ್ಸವ ನಡೆಯುವುದು ಬಹಳ ಅಪರೂಪ ಮತ್ತು ವಿರಳ. ಆದರೆ ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಾತ್ರ ಆಷಾಢದ ಜಾತ್ರೆ ನಡೆಯಲಿದೆ. ಇದೇ ಜುಲೈ.20ರಂದು ರಥೋತ್ಸವ ನಡೆಯಲಿದ್ದು, ಸಾಂಪ್ರದಾಯಿಕವಾಗಿ ತಯಾರಿ ಆರಂಭಗೊಂಡಿದೆ.

ಚಾಮರಾಜೇಶ್ವರ ರಥೋತ್ಸವವು ನೂರಾರು ವರ್ಷಗಳಿಂದ ನಡೆದುಕೊಂಡು ಬರುತ್ತಿದ್ದು, ಇದು ದಂಪತಿಗಳ ಜಾತ್ರೆ ಅಂತಲೇ ಜನಪ್ರಿಯವಾಗಿದೆ. ಮದುವೆಯಾದ ಹೊಸತರಲ್ಲಿ ಪತ್ನಿ ತವರಿನಲ್ಲಿ ಇರುವುದರಿಂದ ಈ ಜಾತ್ರೆಯ ದಿನದಂದು ಪತಿ-ಪತ್ನಿ ಭೇಟಿಯಾಗಿ ಹಣ್ಣು ಜವನ ಎಸೆದು ಪ್ರಾರ್ಥನೆ ಸಲ್ಲಿಸುವುದು ಇಲ್ಲಿನ ವಿಶೇಷವಾಗಿದೆ.

ತೇರು ಕಟ್ಟುವ ಕಾರ್ಯದಲ್ಲಿ ನುರಿತರು ಪಾಲ್ಗೊಂಡಿದ್ದು, ಈ ಬಾರಿ ಮಳೆ ಉತ್ತಮವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಜಾತ್ರೆ ಮಾಡಲು ಭಕ್ತರು ಅಣಿಯಾಗುತ್ತಿದ್ದಾರೆ. ಈ ಜಾತ್ರೆಯಲ್ಲಿ ನವಜೋಡಿಗಳ ಕಲರವವೇ ಎಲ್ಲರ ಕೇಂದ್ರ ಬಿಂದುವಾಗಿದ್ದು, ಇದರಿಂದ ಚಾಮರಾಜನಗರದಲ್ಲಿ ಜಾತ್ರೆ ಕಳೆ ಹೆಚ್ಚಿದಂತಾಗಲಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

3 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

3 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

3 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

3 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

4 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

4 hours ago