ಚಾಮರಾಜನಗರ

ರಾಜ್ಯದ ಏಕೈಕ ಆಷಾಢ ರಥೋತ್ಸವಕ್ಕೆ ಸಿದ್ಧತೆ ಹೇಗಿದೆ ಗೊತ್ತಾ.?

ಚಾಮರಾಜನಗರ: ಆಷಾಢ ಮಾಸದಲ್ಲಿ ನಡೆಯುವ ರಾಜ್ಯದ ಏಕೈಕ ರಥೋತ್ಸವವಾದ ಚಾಮರಾಜನಗರದ ಚಾಮರಾಜೇಶ್ವರ ರಥೋತ್ಸವಕ್ಕೆ ಸಿದ್ಧತೆ ಆರಂಭಗೊಂಡಿದ್ದು, ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ರಥ ಕಟ್ಟುವ ಕಾರ್ಯಕ್ಕೆ ಚಾಲನೆ ಕೊಟ್ಟಿದ್ದಾರೆ.

ಆಷಾಢ ಮಾಸದಲ್ಲಿ ರಥೋತ್ಸವ ನಡೆಯುವುದು ಬಹಳ ಅಪರೂಪ ಮತ್ತು ವಿರಳ. ಆದರೆ ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಾತ್ರ ಆಷಾಢದ ಜಾತ್ರೆ ನಡೆಯಲಿದೆ. ಇದೇ ಜುಲೈ.20ರಂದು ರಥೋತ್ಸವ ನಡೆಯಲಿದ್ದು, ಸಾಂಪ್ರದಾಯಿಕವಾಗಿ ತಯಾರಿ ಆರಂಭಗೊಂಡಿದೆ.

ಚಾಮರಾಜೇಶ್ವರ ರಥೋತ್ಸವವು ನೂರಾರು ವರ್ಷಗಳಿಂದ ನಡೆದುಕೊಂಡು ಬರುತ್ತಿದ್ದು, ಇದು ದಂಪತಿಗಳ ಜಾತ್ರೆ ಅಂತಲೇ ಜನಪ್ರಿಯವಾಗಿದೆ. ಮದುವೆಯಾದ ಹೊಸತರಲ್ಲಿ ಪತ್ನಿ ತವರಿನಲ್ಲಿ ಇರುವುದರಿಂದ ಈ ಜಾತ್ರೆಯ ದಿನದಂದು ಪತಿ-ಪತ್ನಿ ಭೇಟಿಯಾಗಿ ಹಣ್ಣು ಜವನ ಎಸೆದು ಪ್ರಾರ್ಥನೆ ಸಲ್ಲಿಸುವುದು ಇಲ್ಲಿನ ವಿಶೇಷವಾಗಿದೆ.

ತೇರು ಕಟ್ಟುವ ಕಾರ್ಯದಲ್ಲಿ ನುರಿತರು ಪಾಲ್ಗೊಂಡಿದ್ದು, ಈ ಬಾರಿ ಮಳೆ ಉತ್ತಮವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಜಾತ್ರೆ ಮಾಡಲು ಭಕ್ತರು ಅಣಿಯಾಗುತ್ತಿದ್ದಾರೆ. ಈ ಜಾತ್ರೆಯಲ್ಲಿ ನವಜೋಡಿಗಳ ಕಲರವವೇ ಎಲ್ಲರ ಕೇಂದ್ರ ಬಿಂದುವಾಗಿದ್ದು, ಇದರಿಂದ ಚಾಮರಾಜನಗರದಲ್ಲಿ ಜಾತ್ರೆ ಕಳೆ ಹೆಚ್ಚಿದಂತಾಗಲಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

55 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

59 mins ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

1 hour ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

1 hour ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

1 hour ago