ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ ಸ್ಥಳಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಭೇಟಿ ನೀಡಿ, ಪರಿಶೀಲಿಸಿ, ವೈಯಕ್ತಿಕ ಪರಿಹಾರ ನೀಡಿದರು.
ಇದೇ ವೇಳೆ ಕೆ.ಕೆ.ಹುಂಡಿ ಗ್ರಾಮ, ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಗಾಳಿ ಮಳೆಯಿಂದ ಬಾಳೆಬೆಳೆ, ತೆಂಗಿನಗಿಡ ಸೇರಿದಂತೆ ಬೆಳೆಗಳು ಹಾನಿಯಾಗಿರುವ ಸಂಬಂಧ ರೈತರಿಂದ ಮಾಹಿತಿ ಪಡೆದುಕೊಂಡರು.
ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮಳೆಯಿಂದ ಮನೆ ಗೋಡೆ ಕುಸಿದಿದ್ದು, ಮನೆಗಳಿಗೆ ಸೂಕ್ತ ಪರಿಹಾರ ನೀಡಬೇಕು. ಗಾಳಿ ಮಳೆಗೆ ಬೆಳೆಗಳು ಎಲ್ಲೆಲ್ಲಿ ಹಾನಿಯಾಗಿವೆ. ಅಂತಹ ಗ್ರಾಮಗಳಿಗೆ ರಾಜಸ್ವ ನಿರೀಕ್ಷಕರು, ಕಂದಾಯಾಧಿಕಾರಿಗಳು ಭೇಟಿ ನೀಡಿ, ರೈತರಿಂದ ಮಾಹಿತಿ ಪಡೆದುಕೊಂಡು, ಸೂಕ್ತ ಪರಿಹಾರ ಕೊಡಿಸುವ ಸಂಬಂಧ ಸರ್ಕಾರಕ್ಕೆ ಅಂದಾಜುಪಟ್ಟಿ ಸಲ್ಲಿಸುವಂತೆ ಶಾಸಕರು ಸೂಚನೆ ನೀಡಿದರು.
ರಾಜಸ್ವ ನಿರೀಕ್ಷಕರಾದ ರಾಜಶೇಖರ್, ಗುರುಸಿದ್ದಪ್ಪ, ಗ್ರಾಮ ಆಡಳಿತಾಧಿಕಾರಿ ವೆಂಕಟೇಶ್, ತಾಪಂ ಮಾಜಿ ಸದಸ್ಯ ಎಚ್.ಎಂ.ಮಹದೇವಶೆಟ್ಟಿ, ಗ್ರಾಪಂ ಮಾಜಿ ಅಧ್ಯಕ್ಷರಾದ ಮಂಜುನಾಥ್, ಕುಮಾರ್, ಮುಖಂಡರಾದ ಉಡಿಗಾಲನಂಜಪ್ಪ, ದೊರೆಸ್ವಾಮಿ, ಕೇಶವಮೂರ್ತಿ, ಶಿವಣ್ಣ, ಸುಬ್ರಹ್ಮಣ್ಯ, ಮಹದೇವಸ್ವಾಮಿ, ಕುಮಾರ್, ಇತರರು ಹಾಜರಿದ್ದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…