ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ ಸ್ಥಳಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಭೇಟಿ ನೀಡಿ, ಪರಿಶೀಲಿಸಿ, ವೈಯಕ್ತಿಕ ಪರಿಹಾರ ನೀಡಿದರು.
ಇದೇ ವೇಳೆ ಕೆ.ಕೆ.ಹುಂಡಿ ಗ್ರಾಮ, ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಗಾಳಿ ಮಳೆಯಿಂದ ಬಾಳೆಬೆಳೆ, ತೆಂಗಿನಗಿಡ ಸೇರಿದಂತೆ ಬೆಳೆಗಳು ಹಾನಿಯಾಗಿರುವ ಸಂಬಂಧ ರೈತರಿಂದ ಮಾಹಿತಿ ಪಡೆದುಕೊಂಡರು.
ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮಳೆಯಿಂದ ಮನೆ ಗೋಡೆ ಕುಸಿದಿದ್ದು, ಮನೆಗಳಿಗೆ ಸೂಕ್ತ ಪರಿಹಾರ ನೀಡಬೇಕು. ಗಾಳಿ ಮಳೆಗೆ ಬೆಳೆಗಳು ಎಲ್ಲೆಲ್ಲಿ ಹಾನಿಯಾಗಿವೆ. ಅಂತಹ ಗ್ರಾಮಗಳಿಗೆ ರಾಜಸ್ವ ನಿರೀಕ್ಷಕರು, ಕಂದಾಯಾಧಿಕಾರಿಗಳು ಭೇಟಿ ನೀಡಿ, ರೈತರಿಂದ ಮಾಹಿತಿ ಪಡೆದುಕೊಂಡು, ಸೂಕ್ತ ಪರಿಹಾರ ಕೊಡಿಸುವ ಸಂಬಂಧ ಸರ್ಕಾರಕ್ಕೆ ಅಂದಾಜುಪಟ್ಟಿ ಸಲ್ಲಿಸುವಂತೆ ಶಾಸಕರು ಸೂಚನೆ ನೀಡಿದರು.
ರಾಜಸ್ವ ನಿರೀಕ್ಷಕರಾದ ರಾಜಶೇಖರ್, ಗುರುಸಿದ್ದಪ್ಪ, ಗ್ರಾಮ ಆಡಳಿತಾಧಿಕಾರಿ ವೆಂಕಟೇಶ್, ತಾಪಂ ಮಾಜಿ ಸದಸ್ಯ ಎಚ್.ಎಂ.ಮಹದೇವಶೆಟ್ಟಿ, ಗ್ರಾಪಂ ಮಾಜಿ ಅಧ್ಯಕ್ಷರಾದ ಮಂಜುನಾಥ್, ಕುಮಾರ್, ಮುಖಂಡರಾದ ಉಡಿಗಾಲನಂಜಪ್ಪ, ದೊರೆಸ್ವಾಮಿ, ಕೇಶವಮೂರ್ತಿ, ಶಿವಣ್ಣ, ಸುಬ್ರಹ್ಮಣ್ಯ, ಮಹದೇವಸ್ವಾಮಿ, ಕುಮಾರ್, ಇತರರು ಹಾಜರಿದ್ದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…