ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ ಮನೆಮಾಡಿದೆ.
ಇಂದಿನಿಂದ ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಆರಂಭವಾಗಿದ್ದು, ಜಾತ್ರೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಪ್ರಾರಂಭವಾಗಿವೆ.
ಅಕ್ಟೋಬರ್.19ರಂದು ಮಲೆಮಹದೇಶ್ವರ ಸ್ವಾಮಿಗೆ ಎಣ್ಣೆಮಜ್ಜನ ಹಾಗೂ ವಿಶೇಷ ಸೇವೆ, ಉತ್ಸವಾದಿಗಳು ನಡೆಯಲಿವೆ. ಅಕ್ಟೋಬರ್.20ರಂದು ನರಕ ಚತುರ್ದಶಿ, ವಿಶೇಷ ಸೇವೆ ಹಾಗೂ ಉತ್ಸವಾದಿಗಳು, ಅಕ್ಟೋಬರ್.21ರಂದು ದೀಪಾವಳಿ ಅಮಾವಾಸ್ಯೆ ಪ್ರಯುಕ್ತ ಬೆಳಿಗ್ಗೆಯಿಂದಲೇ ಹಾಲರವಿ ಸೇವೆ ಸೇರಿದಂತೆ ವಿಶೇಷ ಸೇವೆ ಮತ್ತು ಉತ್ಸವಾದಿಗಳು ನಡೆಯಲಿವೆ.
ಇದನ್ನು ಓದಿ : ಚಾಮರಾಜನಗರ| ದೀಪಾವಳಿ ಜಾತ್ರೆಗೆ ಸಜ್ಜಾಗುತ್ತಿರುವ ಮಲೆ ಮಹದೇಶ್ವರ ಬೆಟ್ಟ
ಅಕ್ಟೋಬರ್.22ರಂದು ಬೆಳಿಗ್ಗೆ 9.15ರಿಂದ 9.55ರವರೆಗೆ ದೀಪಾವಳಿ ಮಹಾರಥೋತ್ಸವ ನಡೆಯಲಿದೆ. ಅಕ್ಟೋಬರ್.27ರಂದು ಕಾರ್ತಿಕ ಸೋಮವಾರ ಜಾತ್ರಾ ಮಹೋತ್ಸವ ಆರಂಭವಾಗಲಿವೆ.
ದೀಪಾವಳಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಿದ್ದಾರೆ. ರಾಜ್ಯ ಮಾತ್ರವಲ್ಲದೇ ಹೊರರಾಜ್ಯಗಳಿಂದಲೂ ಸಾರ್ವಜನಿಕರು ಆಗಮಿಸುತ್ತಿದ್ದು, ಇದಕ್ಕಾಗಿ ಬೆಟ್ಟದಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಇನ್ನು ಕರ್ನಾಟಕ ಮಾತ್ರವಲ್ಲದೇ ನೆರೆಯ ರಾಜ್ಯಗಳಿಂದಲೂ ಮಲೆ ಮಹದೇಶ್ವರ ಬೆಟ್ಟಕ್ಕೆ ಹೆಚ್ಚಿನ ಭಕ್ತರು ಬರುವುದರಿಂದ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ತಮಿಳುನಾಡಿನಿಂದ 150, ಕೆಎಸ್ಆರ್ಟಿಸಿಯಿಂದ 300ಕ್ಕೂ ಹೆಚ್ಚು ಬಸ್ಗಳು ರಾಜ್ಯದ ಹಲವೆಡೆಯಿಂದ ಸಂಚಾರ ಮಾಡಲಿವೆ.





