ಚಾಮರಾಜನಗರ

ಚಾಮರಾಜನಗರ| ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ

ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ ಮನೆಮಾಡಿದೆ.

ಇಂದಿನಿಂದ ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಆರಂಭವಾಗಿದ್ದು, ಜಾತ್ರೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಪ್ರಾರಂಭವಾಗಿವೆ.

ಅಕ್ಟೋಬರ್.‌19ರಂದು ಮಲೆಮಹದೇಶ್ವರ ಸ್ವಾಮಿಗೆ ಎಣ್ಣೆಮಜ್ಜನ ಹಾಗೂ ವಿಶೇಷ ಸೇವೆ, ಉತ್ಸವಾದಿಗಳು ನಡೆಯಲಿವೆ. ಅಕ್ಟೋಬರ್.‌20ರಂದು ನರಕ ಚತುರ್ದಶಿ, ವಿಶೇಷ ಸೇವೆ ಹಾಗೂ ಉತ್ಸವಾದಿಗಳು, ಅಕ್ಟೋಬರ್.‌21ರಂದು ದೀಪಾವಳಿ ಅಮಾವಾಸ್ಯೆ ಪ್ರಯುಕ್ತ ಬೆಳಿಗ್ಗೆಯಿಂದಲೇ ಹಾಲರವಿ ಸೇವೆ ಸೇರಿದಂತೆ ವಿಶೇಷ ಸೇವೆ ಮತ್ತು ಉತ್ಸವಾದಿಗಳು ನಡೆಯಲಿವೆ.

ಇದನ್ನು ಓದಿ : ಚಾಮರಾಜನಗರ| ದೀಪಾವಳಿ ಜಾತ್ರೆಗೆ ಸಜ್ಜಾಗುತ್ತಿರುವ ಮಲೆ ಮಹದೇಶ್ವರ ಬೆಟ್ಟ

ಅಕ್ಟೋಬರ್.‌22ರಂದು ಬೆಳಿಗ್ಗೆ 9.15ರಿಂದ 9.55ರವರೆಗೆ ದೀಪಾವಳಿ ಮಹಾರಥೋತ್ಸವ ನಡೆಯಲಿದೆ. ಅಕ್ಟೋಬರ್.‌27ರಂದು ಕಾರ್ತಿಕ ಸೋಮವಾರ ಜಾತ್ರಾ ಮಹೋತ್ಸವ ಆರಂಭವಾಗಲಿವೆ.

ದೀಪಾವಳಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಿದ್ದಾರೆ. ರಾಜ್ಯ ಮಾತ್ರವಲ್ಲದೇ ಹೊರರಾಜ್ಯಗಳಿಂದಲೂ ಸಾರ್ವಜನಿಕರು ಆಗಮಿಸುತ್ತಿದ್ದು, ಇದಕ್ಕಾಗಿ ಬೆಟ್ಟದಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇನ್ನು ಕರ್ನಾಟಕ ಮಾತ್ರವಲ್ಲದೇ ನೆರೆಯ ರಾಜ್ಯಗಳಿಂದಲೂ ಮಲೆ ಮಹದೇಶ್ವರ ಬೆಟ್ಟಕ್ಕೆ ಹೆಚ್ಚಿನ ಭಕ್ತರು ಬರುವುದರಿಂದ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ತಮಿಳುನಾಡಿನಿಂದ 150, ಕೆಎಸ್‌ಆರ್‌ಟಿಸಿಯಿಂದ 300ಕ್ಕೂ ಹೆಚ್ಚು ಬಸ್‌ಗಳು ರಾಜ್ಯದ ಹಲವೆಡೆಯಿಂದ ಸಂಚಾರ ಮಾಡಲಿವೆ.

ಆಂದೋಲನ ಡೆಸ್ಕ್

Recent Posts

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

5 hours ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

5 hours ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

6 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

6 hours ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

22 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

1 day ago