ಚಾಮರಾಜನಗರ: ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟವನ್ನು ಪರಿಣಾಮಕಾರಿಯಾಗಿ ತಡೆಯುವ ಸಲುವಾಗಿ ಜಿಲ್ಲೆಯ ವಿವಿಧೆಡೆ ಕಾರ್ಯಚರಣೆ ನಡೆಸಿ, ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿದ್ದವರ ಬಳಿ ಮದ್ಯದ ಪಾಕಿಟ್ಗಳನ್ನು ವಶಪಡಿಸಿಕೊಂಡು ದೂರು ದಾಖಲಿಸಲಾಗಿದೆ.
ಯಳಂದೂರು ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕರಾದ ಹನಮಂತ ಉಪ್ಪಾರ್ ರವರಿಗೆ ದೊರೆತ ಮಾಹಿತಿ ಮೇರೆಗೆ ಆಗಸ್ಟ್ ೨೭ರಂದು ಬೆಳಿಗ್ಗೆ ೧೧.೩೫ ಗಂಟೆ ಸಮಯದಲ್ಲಿ ಕಂದಹಳ್ಳಿ ಗ್ರಾಮದ ಅಂಬಳೆ ಪಾಲದ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡಲು ಅವಕಾಶ ಮಾಡಿಕೊಡುತಿದ್ದ ವ್ಯಕ್ತಿಯೋರ್ವನಿಂದ ೯೯೯.೨೫ ರೂ. ಮೌಲ್ಯದ ೯೦ ಎಂ.ಎಲ್.ನ ೨೫ ಮದ್ಯದ ಪೌಚ್ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.
ಸಂತೇಮರಹಳ್ಳಿ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕರಾದ ತಾಜುದ್ದೀನ್ ರವರಿಗೆ ದೊರೆತ ಮಾಹಿತಿ ಮೇರೆಗೆ ಆಗಸ್ಟ್ ೨೭ರಂದು ರಾತ್ರಿ ೭.೧೫ರ ಸಮಯದಲ್ಲಿ ಹುಲ್ಲೇಪುರ ಗ್ರಾಮದ ಹತ್ತಿರ ಇರುವ ಕಬಿನಿ ಚಾನಲ್ ಸೇತುವೆ ಬಳಿ ಚುಂಗಡಿಪುರ ಹುಲ್ಲೇಪುರ ರಸ್ತೆಯಲ್ಲಿ ವ್ಯಕ್ತಿಯೋರ್ವ ಮೋಟಾರು ಬೈಕ್ಲ್ಲಿ ಅಕ್ರಮವಾಗಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಾಗಾಣಿಕೆ ಮಾಡುತ್ತಿದ್ದ ೧೯೧೯ ರೂ. ಮೌಲ್ಯದ ೯೦ ಎಂ.ಎಲ್. ಸಾಮರ್ಥ್ಯದ ೪೮ ಟೆಟ್ರಾಪ್ಯಾಕ್ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.
ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ದಿವಾಕರ್.ಎಂ. ರವರಿಗೆ ದೊರೆತ ಮಾಹಿತಿ ಮೇರೆಗೆ ಆಗಸ್ಟ್ ೨೭ರಂದು ಬೆಳಿಗ್ಗೆ ೯.೩೦ ಗಂಟೆ ಸಮಯದಲ್ಲಿ ಜ್ಯೋತಿಗೌಡನ ಪುರ ಗ್ರಾಮದ ಮಾರಮ್ಮ ದೇವಸ್ಥಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಲೈಸೆನ್ಸ್ ಇಲ್ಲದೆ ಅಕ್ರಮವಾಗಿ ಮದ್ಯದ ಪೌಚ್ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನಿಂದ ೯೦ ಎಂಎಲ್ನ (೧.೮ಲೀ) ೧೨ ಪೌಚ್ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…