ಚಾಮರಾಜನಗರ: ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟವನ್ನು ಪರಿಣಾಮಕಾರಿಯಾಗಿ ತಡೆಯುವ ಸಲುವಾಗಿ ಜಿಲ್ಲೆಯ ವಿವಿಧೆಡೆ ಕಾರ್ಯಚರಣೆ ನಡೆಸಿ, ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿದ್ದವರ ಬಳಿ ಮದ್ಯದ ಪಾಕಿಟ್ಗಳನ್ನು ವಶಪಡಿಸಿಕೊಂಡು ದೂರು ದಾಖಲಿಸಲಾಗಿದೆ.
ಯಳಂದೂರು ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕರಾದ ಹನಮಂತ ಉಪ್ಪಾರ್ ರವರಿಗೆ ದೊರೆತ ಮಾಹಿತಿ ಮೇರೆಗೆ ಆಗಸ್ಟ್ ೨೭ರಂದು ಬೆಳಿಗ್ಗೆ ೧೧.೩೫ ಗಂಟೆ ಸಮಯದಲ್ಲಿ ಕಂದಹಳ್ಳಿ ಗ್ರಾಮದ ಅಂಬಳೆ ಪಾಲದ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡಲು ಅವಕಾಶ ಮಾಡಿಕೊಡುತಿದ್ದ ವ್ಯಕ್ತಿಯೋರ್ವನಿಂದ ೯೯೯.೨೫ ರೂ. ಮೌಲ್ಯದ ೯೦ ಎಂ.ಎಲ್.ನ ೨೫ ಮದ್ಯದ ಪೌಚ್ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.
ಸಂತೇಮರಹಳ್ಳಿ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕರಾದ ತಾಜುದ್ದೀನ್ ರವರಿಗೆ ದೊರೆತ ಮಾಹಿತಿ ಮೇರೆಗೆ ಆಗಸ್ಟ್ ೨೭ರಂದು ರಾತ್ರಿ ೭.೧೫ರ ಸಮಯದಲ್ಲಿ ಹುಲ್ಲೇಪುರ ಗ್ರಾಮದ ಹತ್ತಿರ ಇರುವ ಕಬಿನಿ ಚಾನಲ್ ಸೇತುವೆ ಬಳಿ ಚುಂಗಡಿಪುರ ಹುಲ್ಲೇಪುರ ರಸ್ತೆಯಲ್ಲಿ ವ್ಯಕ್ತಿಯೋರ್ವ ಮೋಟಾರು ಬೈಕ್ಲ್ಲಿ ಅಕ್ರಮವಾಗಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಾಗಾಣಿಕೆ ಮಾಡುತ್ತಿದ್ದ ೧೯೧೯ ರೂ. ಮೌಲ್ಯದ ೯೦ ಎಂ.ಎಲ್. ಸಾಮರ್ಥ್ಯದ ೪೮ ಟೆಟ್ರಾಪ್ಯಾಕ್ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.
ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ದಿವಾಕರ್.ಎಂ. ರವರಿಗೆ ದೊರೆತ ಮಾಹಿತಿ ಮೇರೆಗೆ ಆಗಸ್ಟ್ ೨೭ರಂದು ಬೆಳಿಗ್ಗೆ ೯.೩೦ ಗಂಟೆ ಸಮಯದಲ್ಲಿ ಜ್ಯೋತಿಗೌಡನ ಪುರ ಗ್ರಾಮದ ಮಾರಮ್ಮ ದೇವಸ್ಥಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಲೈಸೆನ್ಸ್ ಇಲ್ಲದೆ ಅಕ್ರಮವಾಗಿ ಮದ್ಯದ ಪೌಚ್ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನಿಂದ ೯೦ ಎಂಎಲ್ನ (೧.೮ಲೀ) ೧೨ ಪೌಚ್ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…