ಚಾಮರಾಜನಗರ

ಚಾಮರಾಜನಗರ: ರಾಜ್ಯಕ್ಕೆ ನಂಬರ್ ಓನ್ ಸ್ಥಾನ ಪಡೆದ ಕುದೇರು ಪೊಲೀಸ್ ಠಾಣೆ!

ಚಾಮರಾಜನಗರ : ಕೇಂದ್ರ ಗೃಹ ಇಲಾಖೆ ನಡೆಸಿದ ಸರ್ವೆಯಲ್ಲಿ ಕುದೇರು ಪೊಲೀಸ್ ಠಾಣೆ ರಾಜ್ಯಕ್ಕೆ ನಂಬರ್ ಓನ್ ಹಾಗೂ ದೇಶದಲ್ಲೇ ಐದನೇ ಸ್ಥಾನ ಲಭಿಸಿದೆ. ಪೊಲೀಸ್ ಠಾಣೆ ನಿರ್ವಹಣೆ ಹಾಗೂ ಜನ ಸ್ನೇಹಿ ಪೊಲೀಸ್ ಠಾಣೆ ಎಂಬ ಹೆಗ್ಗಳಿಕೆಗೆ ಕುದೇರು ಪೊಲೀಸ್ ಠಾಣೆ ಪಾತ್ರವಾಗಿದೆ.

ಕೇಂದ್ರ ಗೃಹ ಇಲಾಖೆ ನಡೆಸಿದ ಸರ್ವೆಯಲ್ಲಿ ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕಿನ ಕುದೇರು ಪೊಲೀಸ್ ಠಾಣೆ ರಾಜ್ಯದಲ್ಲೇ ನಂಬರ್ ಓನ್ ಪೊಲೀಸ್ ಠಾಣೆ ಹಾಗೂ ದೇಶದಲ್ಲೇ ಐದನೇ ಸ್ಥಾನ ಎಂಬ ಪ್ರಶಂಸೆ ಪಡೆದಿದೆ.

ಇನ್ನು ಯಾವ ಆಯಾಮದಲ್ಲಿ ಈ ಕುದೇರು ಪೊಲೀಸ್ ಠಾಣೆಗೆ ನಂಬರ್ ಓನ್ ಸ್ಥಾನ ಸಿಕ್ಕಿದೆ ಎಂದು ನೋಡುವುದಾದರೆ. ಕ್ರೈಂ ಕಂಟ್ರೋಲ್, ಅಬಕಾರಿ ನೀತಿ, ಜನಸ್ನೇಹಿ, ಶುಚಿತ್ವ, ಕ್ರೈಂ ಪ್ರಿವೆನ್ಷನ್ ಸೇರಿದಂತೆ ಈ ಎಲ್ಲಾ ಆಯಾಮಗಳನ್ನ ಪರಿಶೀಲಿಸಿ ರಾಜ್ಯದ 2223 ಪೊಲೀಸ್ ಠಾಣೆಗಳ ಪೈಕಿ ಈಗ ಕುದೇರು ಪೊಲೀಸ್ ಠಾಣೆಗೆ ನಂಬರ್ ಓನ್ ಸ್ಥಾನ ಸಿಕ್ಕಿದ್ದು ಈಗ ಸಾಕಷ್ಟು ಜನ ಮನ್ನಣೆಗೆ ಪಾತ್ರವಾಗಿದೆ.

ಒಟ್ಟಾರೆ ಚಾಮರಾಜನಗರ ಜಿಲ್ಲೆಯ ಕುದೇರು ಪೊಲೀಸ್ ಠಾಣೆಗೆ ರಾಜ್ಯದಲ್ಲೇ ನಂಬರ್ ಓನ್ ಸ್ಥಾನ, ದೇಶದಲ್ಲೇ ಐದನೇ ಸ್ಥಾನ ಪಡೆದು ಜಿಲ್ಲೆಗೆ ಪ್ರಶಂಸೆ ತಂದಿದೆ.

andolanait

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

6 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

6 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

6 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

6 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

6 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

6 hours ago