ಚಾಮರಾಜನಗರ : ಕೇಂದ್ರ ಗೃಹ ಇಲಾಖೆ ನಡೆಸಿದ ಸರ್ವೆಯಲ್ಲಿ ಕುದೇರು ಪೊಲೀಸ್ ಠಾಣೆ ರಾಜ್ಯಕ್ಕೆ ನಂಬರ್ ಓನ್ ಹಾಗೂ ದೇಶದಲ್ಲೇ ಐದನೇ ಸ್ಥಾನ ಲಭಿಸಿದೆ. ಪೊಲೀಸ್ ಠಾಣೆ ನಿರ್ವಹಣೆ ಹಾಗೂ ಜನ ಸ್ನೇಹಿ ಪೊಲೀಸ್ ಠಾಣೆ ಎಂಬ ಹೆಗ್ಗಳಿಕೆಗೆ ಕುದೇರು ಪೊಲೀಸ್ ಠಾಣೆ ಪಾತ್ರವಾಗಿದೆ.
ಕೇಂದ್ರ ಗೃಹ ಇಲಾಖೆ ನಡೆಸಿದ ಸರ್ವೆಯಲ್ಲಿ ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕಿನ ಕುದೇರು ಪೊಲೀಸ್ ಠಾಣೆ ರಾಜ್ಯದಲ್ಲೇ ನಂಬರ್ ಓನ್ ಪೊಲೀಸ್ ಠಾಣೆ ಹಾಗೂ ದೇಶದಲ್ಲೇ ಐದನೇ ಸ್ಥಾನ ಎಂಬ ಪ್ರಶಂಸೆ ಪಡೆದಿದೆ.
ಇನ್ನು ಯಾವ ಆಯಾಮದಲ್ಲಿ ಈ ಕುದೇರು ಪೊಲೀಸ್ ಠಾಣೆಗೆ ನಂಬರ್ ಓನ್ ಸ್ಥಾನ ಸಿಕ್ಕಿದೆ ಎಂದು ನೋಡುವುದಾದರೆ. ಕ್ರೈಂ ಕಂಟ್ರೋಲ್, ಅಬಕಾರಿ ನೀತಿ, ಜನಸ್ನೇಹಿ, ಶುಚಿತ್ವ, ಕ್ರೈಂ ಪ್ರಿವೆನ್ಷನ್ ಸೇರಿದಂತೆ ಈ ಎಲ್ಲಾ ಆಯಾಮಗಳನ್ನ ಪರಿಶೀಲಿಸಿ ರಾಜ್ಯದ 2223 ಪೊಲೀಸ್ ಠಾಣೆಗಳ ಪೈಕಿ ಈಗ ಕುದೇರು ಪೊಲೀಸ್ ಠಾಣೆಗೆ ನಂಬರ್ ಓನ್ ಸ್ಥಾನ ಸಿಕ್ಕಿದ್ದು ಈಗ ಸಾಕಷ್ಟು ಜನ ಮನ್ನಣೆಗೆ ಪಾತ್ರವಾಗಿದೆ.
ಒಟ್ಟಾರೆ ಚಾಮರಾಜನಗರ ಜಿಲ್ಲೆಯ ಕುದೇರು ಪೊಲೀಸ್ ಠಾಣೆಗೆ ರಾಜ್ಯದಲ್ಲೇ ನಂಬರ್ ಓನ್ ಸ್ಥಾನ, ದೇಶದಲ್ಲೇ ಐದನೇ ಸ್ಥಾನ ಪಡೆದು ಜಿಲ್ಲೆಗೆ ಪ್ರಶಂಸೆ ತಂದಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…