ಚಾಮರಾಜನಗರ

ಚಾಮರಾಜನಗರ | ನಾಟಿ ಕೋಳಿ ಸಾರು, ಮುದ್ದೆ ತಿನ್ನುವ ಸ್ಪರ್ಧೆ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಪಾಳ್ಯ ಗ್ರಾಮದಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ನಾಟಿಕೋಳಿ ಸಾರು ಹಾಗೂ ಮುದ್ದೆ ತಿನ್ನುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು.

ಗ್ರಾಮದ ರವಿಕುಮಾರ್ ಮತ್ತು ಬಸವರಾಜು ಎಂಬುವವರು ಈ ಸ್ಪರ್ಧೆಯನ್ನು ಆಯೋಜನೆ ಮಾಡಿದ್ದು, ಸ್ಪರ್ಧೆಯಲ್ಲಿ 18 ಜನ ಪುರುಷರು, 5 ಮಂದಿ ಮಹಿಳೆಯರು ಭಾಗಿಯಾಗಿದ್ದರು.

ಪುರುಷರ ವಿಭಾಗದಲ್ಲಿ ಕುನ್ನ ನಾಯಕ ಎಂಬುವವರು 11 ಮುದ್ದೆ ತಿಂದು ಪ್ರಥಮ ಸ್ಥಾನ ಪಡೆದಿದ್ದು, ನಾಗಮಲ್ಲ ನಾಯಕ ಎಂಬುವವರು 9 ಮುದ್ದೆ ತಿಂದು ಎರಡನೇ ಸ್ಥಾನ ಪಡೆದಿದ್ದಾರೆ.

ಇನ್ನು ಮಹಿಳೆಯರ ವಿಭಾಗದಲ್ಲಿ ಮಾದೇವಮ್ಮ ಎಂಬುವವರು 5 ಮುದ್ದೆ ತಿಂದು ಮೊದಲ ಸ್ಥಾನ ಪಡೆದರು. ಪ್ರಥಮ ಸ್ಥಾನ ಪಡೆದವರಿಗೆ 5000 ಸಾವಿರ ಬಹುಮಾನ ನೀಡಲಾಗಿದ್ದು, ದ್ವಿತೀಯ ಸ್ಥಾನ ಪಡೆದವರಿಗೆ 2500 ರೂಪಾಯಿ ಬಹುಮಾನ ನೀಡಲಾಯಿತು.

ಇನ್ನು, ಈ ಸ್ಪರ್ಧೆಗೆ 200 ಮುದ್ದೆ ಹಾಗೂ 30 ಕೆಜಿ ನಾಟಿ ಕೋಳಿ ಸಾರನ್ನು ತಯಾರು ಮಾಡಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಮೈಸೂರಿನಿಂದ ಲಕ್ನೋಗೆ ಭವ್ಯ ಪೀಠ : UP ವಿಧಾನಸಭೆಯಲ್ಲಿ ಕರ್ನಾಟಕದ ಕಲಾ ಛಾಪು

ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…

3 mins ago

ಮಾರ್ಚ್‌ನಲ್ಲಿ ಬಜೆಟ್‌ ಮಂಡನೆ : ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…

31 mins ago

ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ ಸೇದಿ ಫೋಟೋಶೂಟ್:‌ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…

38 mins ago

ಮೆಟ್ರೋ ಪ್ರಯಾಣ ದರ ಏರಿಕೆ: ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥನೆ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…

1 hour ago

ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮುಂದುವರಿದ ಹಸುಗಳ ಮರಣ ಮೃದಂಗ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…

2 hours ago

ಚಾಮುಂಡಿಬೆಟ್ಟಕ್ಕೆ ನಟ ಕಿಚ್ಚ ಸುದೀಪ್‌ ಭೇಟಿ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ…

2 hours ago