ಚಾಮರಾಜನಗರ

ಚಾಮರಾಜನಗರ | ನಾಟಿ ಕೋಳಿ ಸಾರು, ಮುದ್ದೆ ತಿನ್ನುವ ಸ್ಪರ್ಧೆ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಪಾಳ್ಯ ಗ್ರಾಮದಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ನಾಟಿಕೋಳಿ ಸಾರು ಹಾಗೂ ಮುದ್ದೆ ತಿನ್ನುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು.

ಗ್ರಾಮದ ರವಿಕುಮಾರ್ ಮತ್ತು ಬಸವರಾಜು ಎಂಬುವವರು ಈ ಸ್ಪರ್ಧೆಯನ್ನು ಆಯೋಜನೆ ಮಾಡಿದ್ದು, ಸ್ಪರ್ಧೆಯಲ್ಲಿ 18 ಜನ ಪುರುಷರು, 5 ಮಂದಿ ಮಹಿಳೆಯರು ಭಾಗಿಯಾಗಿದ್ದರು.

ಪುರುಷರ ವಿಭಾಗದಲ್ಲಿ ಕುನ್ನ ನಾಯಕ ಎಂಬುವವರು 11 ಮುದ್ದೆ ತಿಂದು ಪ್ರಥಮ ಸ್ಥಾನ ಪಡೆದಿದ್ದು, ನಾಗಮಲ್ಲ ನಾಯಕ ಎಂಬುವವರು 9 ಮುದ್ದೆ ತಿಂದು ಎರಡನೇ ಸ್ಥಾನ ಪಡೆದಿದ್ದಾರೆ.

ಇನ್ನು ಮಹಿಳೆಯರ ವಿಭಾಗದಲ್ಲಿ ಮಾದೇವಮ್ಮ ಎಂಬುವವರು 5 ಮುದ್ದೆ ತಿಂದು ಮೊದಲ ಸ್ಥಾನ ಪಡೆದರು. ಪ್ರಥಮ ಸ್ಥಾನ ಪಡೆದವರಿಗೆ 5000 ಸಾವಿರ ಬಹುಮಾನ ನೀಡಲಾಗಿದ್ದು, ದ್ವಿತೀಯ ಸ್ಥಾನ ಪಡೆದವರಿಗೆ 2500 ರೂಪಾಯಿ ಬಹುಮಾನ ನೀಡಲಾಯಿತು.

ಇನ್ನು, ಈ ಸ್ಪರ್ಧೆಗೆ 200 ಮುದ್ದೆ ಹಾಗೂ 30 ಕೆಜಿ ನಾಟಿ ಕೋಳಿ ಸಾರನ್ನು ತಯಾರು ಮಾಡಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

17 mins ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

1 hour ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

1 hour ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

1 hour ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

4 hours ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

7 hours ago