ಚಾಮರಾಜನಗರ: ಜಿಲ್ಲೆಯ ಪುಣಜನೂರು ಅರಣ್ಯ ವ್ಯಾಪ್ತಿಯ ಬೇಡುಗೊಳಿ ಎಸ್ಟೇಟ್ನಲ್ಲಿ ತಾಯಿಯಿಂದ ಬೇರ್ಪಟ್ಟ ಮೂರು ಹುಲಿ ಮರಿಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಿಗಳನ್ನು ಸ್ಪರ್ಶಿಸಿದ್ದ ಎನ್ಜಿಓಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪರಿಸರ ಪ್ರೇಮಿಗಳು ಆಗ್ರಹಿಸಿದ್ದಾರೆ.
ಅಕ್ಟೋಬರ್.15ರಂದು ತಾಯಿಯಿಂದ ಬೇರ್ಪಟ್ಟ ಮೂರು ಹುಲಿ ಮರಿಗಳು ಪತ್ತೆಯಾಗಿದ್ದವು. ಈ ವೇಳೆ ಎನ್ಜಿಓಗೆ ಸೇರಿದ ಕೆಲವರು ಹುಲಿ ಮರಿಗಳನ್ನು ಕೈಯಲ್ಲಿ ಹಿಡಿದು ಸ್ಪರ್ಶಿಸಿ, ವಿಡಿಯೋ ಚಿತ್ರೀಕರಣ ಮಾಡಿದ್ದರು.
ಇದನ್ನು ಓದಿ: 2 ದಿನಗಳಲ್ಲಿ 3 ಹುಲಿ ಮರಿಗಳು ಪತ್ತೆ, ರಕ್ಷಣೆ ; ತಾಯಿ ಹುಲಿ ಪತ್ತೆಗೆ ಮುಂದುವರಿದ ಕೂಂಬಿಂಗ್
ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಳ್ಳಿ ಅವರು ಈ ಕಾನೂನು ಉಲ್ಲಂಘನೆ ಕುರಿತು ಅರಣ್ಯ ಸಚಿವರಿಗೆ ಇಮೇಲ್ ಹಾಗೂ ಪತ್ರದ ಮೂಲಕ ದೂರು ನೀಡಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಬೆಂಗಳೂರು : ಇಡೀ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎಸ್ಐಆರ್ ಪ್ರಕ್ರಿಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬಿಹಾರ ಮತ್ತು…
ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ.…
ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…
• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…
ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…