ಚಾಮರಾಜನಗರ

ಚಾಮರಾಜನಗರ| ಕಳಪೆ ಗುಣಮಟ್ಟದ ಉಪ್ಪು;ಅಂಗಡಿ ಮಾಲೀಕರಿಗೆ ೧೦ ಸಾವಿರ ರೂ.ದಂಡ

ಚಾಮರಾಜನಗರ: ಕಳಪೆ ಗುಣಮಟ್ಟದ ಉಪ್ಪು ಇಡಲಾಗಿದ್ದ ಯಳಂದೂರು ಪಟ್ಟಣದ ಬಿ.ಆರ್. ಹಿಲ್ಸ್ ರಸ್ತೆಯಲ್ಲಿರುವ ಅಂಬೆ ಜನರಲ್ ಸ್ಟೋರ್ ಮಾಲೀಕರಿಗೆ 10 ಸಾವಿರ ರೂ.ದಂಡ ವಿಧಿಸಲಾಗಿದೆ.

ಅಂಬೆ ಜನರಲ್ ಸ್ಟೋರ್ ಮಾಲೀಕರಾದ ಮಹೇಂದ್ರ ಅವರ ಅಂಗಡಿಯಿಂದ ಆಗಸ್ಟ್ 2024ರ ಮಾಹೆಯಲ್ಲಿ ಸಂಶಯಾಸ್ಪದ ಆಶೀರ್ವಾದ್ ಐಯೋಡೈಸ್ಡ್ ಪುಡಿ ಉಪ್ಪಿನ  ಮಾದರಿಯನ್ನು ಆಹಾರ ಸುರಕ್ಷತಾ ಅಧಿಕಾರಿ ಶ್ರೀನಿವಾಸ ಅವರು ಸಂಗ್ರಹಿಸಿ ವಿಶ್ಲೇಷಣೆಗಾಗಿ ಪ್ರಯೋಗ ಶಾಲೆಗೆ ಕಳುಹಿಸಿದ್ದರು. ವಿಶ್ಲೇಷಣಾ ವರದಿಯಲ್ಲಿ ಸದರಿ ಆಶೀರ್ವಾದ್ ಆಯೋಡಿನ್ ಯುಕ್ತ ಪುಡಿ ಉಪ್ಪು ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ದೃಢಪಟ್ಟಿತ್ತು.

ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ನಿಯಮ ಹಾಗೂ ನಿಬಂಧನೆ-2011 ರಡಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗಳು ಹಾಗೂ ನ್ಯಾಯನಿರ್ಣಯಾಧಿಕಾರಿಗಳ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿತ್ತು. ಮೊಕದ್ದಮೆಯನ್ನು ನಡೆಸಿದ ನ್ಯಾಯನಿರ್ಣಯಾಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ 10000 ರೂ. ದಂಡ ವಿಧಿಸಿ ಡಿಸೆಂಬರ್ 2ರಲ್ಲಿ ತೀರ್ಪು ನೀಡಿದ್ದಾರೆ. ಅಂಬೆ ಜನರಲ್ ಸ್ಟೋರ್ ಮಾಲೀಕರಾದ ಮಹೇಂದ್ರ ದಂಡ ಪಾವತಿಸಿದ್ದಾರೆ.

ಸದರಿ ಬ್ಯಾಚ್‌ನ ಅಡುಗೆ ಉಪ್ಪನ್ನು ಯಾವುದೇ ಕಾರಣಕ್ಕೂ ಮಾರಾಟ, ಸಂಗ್ರಹಣೆ ಮಾಡದಂತೆ ಹಾಗೂ ಸಾರ್ವಜನಿಕರಿಗೆ ಯಾವುದೇ ರೂಪದಲ್ಲಿ ಮಾರಾಟ ಮಾಡದಂತೆ ಸಾರ್ವಜನಿಕ ಹಿತದೃಷ್ಠಿಯಿಂದ ನಿಷೇಧಿಸಿ ತೀರ್ಪು ನೀಡಿದ್ದಾರೆ ಎಂದು ಆಹಾರ ಸುರಕ್ಷತೆ ಮತ್ತು ಪ್ರಾಧಿಕಾರದ ಆಹಾರ ಸುರಕ್ಷತಾಧಿಕಾರಿ ಶ್ರೀನಿವಾಸ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

1 hour ago

ಓದುಗರ ಪತ್ರ: ತಡೆಯಲಿ ಸರ್ಕಾರ!

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…

1 hour ago

ಓದುಗರ ಪತ್ರ: ಬಿಪಿಎಲ್ ಆದಾಯ ಮಿತಿ ಹೆಚ್ಚಿಸಿ

ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…

2 hours ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ

ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ…

2 hours ago

ಓದುಗರ ಪತ್ರ: ವಿಷಯದ ಗಂಭೀರತೆ ಮರೆತ ಪೊಲೀಸರು

ತಮಿಳುನಾಡಿನಲ್ಲಿ, ಕಳೆದ ಕೆಲವು ದಿನಗಳ ಹಿಂದೆ, ೧೦ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಕೊಲೆಗೈದ ವಿಷಯಕ್ಕೆ ಸಂಬಂಧಿಸಿದಂತೆ…

2 hours ago

ಓದುಗರ ಪತ್ರ: ಇಂಧನದ ಮೇಲಿನ ತೆರಿಗೆ ಇಳಿಸಿ

ಅಮೆರಿಕ -ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಇರಾನ್ ಹಾರ್ಮುಜ್ ಜಲಸಂಽಯನ್ನು ಮುಚ್ಚಿದ್ದರಿಂದಾಗಿ ಕಚ್ಚಾತೈಲದ ಆಮದು ಪ್ರಮಾಣವು…

2 hours ago