ಚಾಮರಾಜನಗರ

ಚಾಮರಾಜನಗರ| ಕಳಪೆ ಗುಣಮಟ್ಟದ ಉಪ್ಪು;ಅಂಗಡಿ ಮಾಲೀಕರಿಗೆ ೧೦ ಸಾವಿರ ರೂ.ದಂಡ

ಚಾಮರಾಜನಗರ: ಕಳಪೆ ಗುಣಮಟ್ಟದ ಉಪ್ಪು ಇಡಲಾಗಿದ್ದ ಯಳಂದೂರು ಪಟ್ಟಣದ ಬಿ.ಆರ್. ಹಿಲ್ಸ್ ರಸ್ತೆಯಲ್ಲಿರುವ ಅಂಬೆ ಜನರಲ್ ಸ್ಟೋರ್ ಮಾಲೀಕರಿಗೆ 10 ಸಾವಿರ ರೂ.ದಂಡ ವಿಧಿಸಲಾಗಿದೆ.

ಅಂಬೆ ಜನರಲ್ ಸ್ಟೋರ್ ಮಾಲೀಕರಾದ ಮಹೇಂದ್ರ ಅವರ ಅಂಗಡಿಯಿಂದ ಆಗಸ್ಟ್ 2024ರ ಮಾಹೆಯಲ್ಲಿ ಸಂಶಯಾಸ್ಪದ ಆಶೀರ್ವಾದ್ ಐಯೋಡೈಸ್ಡ್ ಪುಡಿ ಉಪ್ಪಿನ  ಮಾದರಿಯನ್ನು ಆಹಾರ ಸುರಕ್ಷತಾ ಅಧಿಕಾರಿ ಶ್ರೀನಿವಾಸ ಅವರು ಸಂಗ್ರಹಿಸಿ ವಿಶ್ಲೇಷಣೆಗಾಗಿ ಪ್ರಯೋಗ ಶಾಲೆಗೆ ಕಳುಹಿಸಿದ್ದರು. ವಿಶ್ಲೇಷಣಾ ವರದಿಯಲ್ಲಿ ಸದರಿ ಆಶೀರ್ವಾದ್ ಆಯೋಡಿನ್ ಯುಕ್ತ ಪುಡಿ ಉಪ್ಪು ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ದೃಢಪಟ್ಟಿತ್ತು.

ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ನಿಯಮ ಹಾಗೂ ನಿಬಂಧನೆ-2011 ರಡಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗಳು ಹಾಗೂ ನ್ಯಾಯನಿರ್ಣಯಾಧಿಕಾರಿಗಳ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿತ್ತು. ಮೊಕದ್ದಮೆಯನ್ನು ನಡೆಸಿದ ನ್ಯಾಯನಿರ್ಣಯಾಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ 10000 ರೂ. ದಂಡ ವಿಧಿಸಿ ಡಿಸೆಂಬರ್ 2ರಲ್ಲಿ ತೀರ್ಪು ನೀಡಿದ್ದಾರೆ. ಅಂಬೆ ಜನರಲ್ ಸ್ಟೋರ್ ಮಾಲೀಕರಾದ ಮಹೇಂದ್ರ ದಂಡ ಪಾವತಿಸಿದ್ದಾರೆ.

ಸದರಿ ಬ್ಯಾಚ್‌ನ ಅಡುಗೆ ಉಪ್ಪನ್ನು ಯಾವುದೇ ಕಾರಣಕ್ಕೂ ಮಾರಾಟ, ಸಂಗ್ರಹಣೆ ಮಾಡದಂತೆ ಹಾಗೂ ಸಾರ್ವಜನಿಕರಿಗೆ ಯಾವುದೇ ರೂಪದಲ್ಲಿ ಮಾರಾಟ ಮಾಡದಂತೆ ಸಾರ್ವಜನಿಕ ಹಿತದೃಷ್ಠಿಯಿಂದ ನಿಷೇಧಿಸಿ ತೀರ್ಪು ನೀಡಿದ್ದಾರೆ ಎಂದು ಆಹಾರ ಸುರಕ್ಷತೆ ಮತ್ತು ಪ್ರಾಧಿಕಾರದ ಆಹಾರ ಸುರಕ್ಷತಾಧಿಕಾರಿ ಶ್ರೀನಿವಾಸ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

11 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

11 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

11 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

11 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

11 hours ago