ಚಾಮರಾಜನಗರ

ಚಾಮರಾಜನಗರ: ನಿರ್ವಾಹಕನ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ಚಾಮರಾಜನಗರ: ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಇಲ್ಲಿಂದ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತದಲ್ಲಿ ಕೆಲಕಾಲ ವಾಹನ ತಡೆದು ಪ್ರತಿಭಟನೆ ನಡೆಸಿದರು.

ಇದೇ ವೇಳೆ ಕರವೇ ತಾಲ್ಲೂಕು ಅಧ್ಯಕ್ಷ ಕ್ವಾಲಿಟಿ ನವೀನ್ ಮಾತನಾಡಿ ಘಟನೆಯ ಬಗ್ಗೆ ಖಂಡಿಸಿದರು.

ಪ್ರತಿಭಟನೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ಆರ್. ಮೋಹನ್, ಉಪಾಧ್ಯಕ್ಷ ಬಾಬು ರಾಮಸಮುದ್ರ, ಅವಿನಾಶ್, ಗೌರವಾಧ್ಯಕ್ಷ ಪುರುಷೋತ್ತಮ್, ಪ್ರಧಾನ ಕಾರ್ಯದರ್ಶಿ ಅರ್ಜುನ್, ಕೊಳ್ಳೇಗಾಲ ತಾಲೂಕಿನ ಅಧ್ಯಕ್ಷ ಜಗದೀಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಂಗಳಮ್ಮ, ಪ್ರಧಾನ ಕಾರ್ಯದರ್ಶಿ ಶಿವಮ್ಮ, ರೇಖಾ ಪದಾಧಿಕಾರಿಗಳು ಸೇರಿದಂತೆ ಇತರರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಕಚ್ಚಾ ತೈಲದ ಬೆಲೆ ಏರಿಕೆ ಸಾಧ್ಯತೆ

ರಿಯಾದ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು, ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದನಾ ರಾಷ್ಟ್ರವಾದ ಸೌದಿ ಅರೇಬಿಯಾದ ತೈಲ…

7 mins ago

ಇರಾನ್-ಇಸ್ರೇಲ್‌ ಸಂಘರ್ಷ: 9 ವಾಯುಪ್ರದೇಶಗಳಲ್ಲಿ ವಿಮಾನ ಹಾರಾಟ ನಡೆಸದಂತೆ DGCA ಸೂಚನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ಗಲ್ಪ್ ಪ್ರದೇಶದಲ್ಲಿನ 9 ವಾಯು ಪ್ರದೇಶಗಳಲ್ಲಿ ಹಾರಾಟ…

17 mins ago

ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ರ ಪರಿಷ್ಕೃತವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಏ.25…

24 mins ago

ಶಿವಮೊಗ್ಗ| ತಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಸಾವು: ಸಚಿವ ಈಶ್ವರ್‌ ಖಂಡ್ರೆ ಸಂತಾಪ

ಬೆಂಗಳೂರು: ಶಿವಮೊಗ್ಗದ ತಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ ದಾಳಿಯಿಂದ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು…

33 mins ago

ರೀಲ್ಸ್‌ ತಂದ ಆಪತ್ತು: ಅಪಘಾತದಲ್ಲಿ ಬಾಲಕ ಸಾವು

ಹುಬ್ಬಳ್ಳಿ: ಸಾಮಾಜಿಕ ಜಾಲತಾಣಗಳಲ್ಲಿ ‘ರೀಲ್ಸ್’ ಮಾಡಲು ಹೋಗಿ 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ…

50 mins ago

ವಿಶ್ವ ಗುಬ್ಬಚ್ಚಿ ದಿನಾಚರಣೆ: ಮೈಸೂರಿನಲ್ಲಿ ಪಕ್ಷಿ ಸಂಕುಲ ರಕ್ಷಣೆಗೆ ಮುಂದಾದ ಮೈಸೂರಿಗರು

ಮೈಸೂರು: ವಿಶ್ವ ಗುಬ್ಬಚ್ಚಿ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಮೈಸೂರಿಗರು ಪಕ್ಷಿ ಸಂಕುಲ ರಕ್ಷಣೆಗೆ ಮುಂದಾಗಿದ್ದಾರೆ. ಮೈಸೂರಿನ ಮಹಾರಾಜ ಮೈದಾನ ಮುಂಭಾಗದ…

58 mins ago