ಚಾಮರಾಜನಗರ: ಅರಣ್ಯ ಪ್ರದೇಶದೊಳಗೆ ವಾಸವಿರುವ ಆದಿವಾಸಿಗಳಿಗೆ ಶೇ.3ರಷ್ಟು ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿ ಜಿಲ್ಲೆಯ ಆದಿವಾಸಿ ಸಂಘಟನೆಗಳ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಲ್ಯಾಂಪ್ಸ್ ಭವನದ ಮುಂಭಾಗದಿಂದ ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದ ನೇತೃತ್ವದಲ್ಲಿ ಮೆರವಣಿಗೆ ಹೊರಟ ಗಿರಿಜನರು, ಡೀವಿಯೇಷನ್ ರಸ್ತೆ, ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದರು.
ಜಿಲ್ಲೆಯ ಹನೂರು, ಕೊಳ್ಳೇಗಾಲ, ಚಾಮರಾಜನಗರ, ಯಳಂದೂರು ಮತ್ತು ಗುಂಡ್ಲುಪೇಟೆ ತಾಲ್ಲೂಕುಗಳ ವ್ಯಾಪ್ತಿಯಲ್ಲಿರುವ ಬಿಳಿಗಿರಿರಂಗ ಬೆಟ್ಟ ಮತ್ತು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಗಳು, ಮಲೆ ಮಹದೇಶ್ವರ ಮತ್ತು ಕಾವೇರಿ ವನ್ಯಜೀವಿ ಧಾಮಗಳಲ್ಲಿ ೪೫ ಸಾವಿರ ಸೋಲಿಗರು, ಜೇನು ಕುರುಬರು ವಾಸವಾಗಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು.
1958ರಲ್ಲಿ ಎಸ್ಸಿ, ಎಸ್ಟಿ ಜನಸಂಖ್ಯೆ ಮತ್ತು ಅವು ಒಳಗೊಳ್ಳುವ ಜಾತಿಗಳ ಸಂಖ್ಯೆಯಂತೆ ಪರಿಶಿಷ್ಟ ಜಾತಿಗಳಿಗೆ ಶೇ.15 ಹಾಗೂ ಪರಿಶಿಷ್ಟ ಪಂಡಗಳಿಗೆ ಶೇ.3, ಹಿಂದುಳಿದ ವರ್ಗಗಳಿಗೆ ಶೇ.37ರಷ್ಟು ಮೀಸಲಾತಿ ನೀಡಲಾಗಿದೆ. ನಿವೃತ್ತ ನ್ಯಾ.ನಾಗಮೋಹನದಾಸ್ ಅವರು ಎಸ್ಸಿ, ಎಸ್ಟಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು. ಅದರಂತೆ ಎಸ್ಸಿಗೆ ಶೇ.15ರಿಂದ 17ಕ್ಕೆ, ಎಸ್ಟಿಗೆ ಶೇ.3ರಿಂದ ಶೇ.7ಕ್ಕೆ ಏರಿಸಬೇಕು ಎಂದು ವರದಿಯಲ್ಲಿ ಹೇಳಿದ್ದಾರೆ. ಮೀಸಲಾತಿಯಿಂದ ವಂಚಿತರಾಗಿರುವ ಆದಿವಾಸಿಗಳಿಗೆ ವಿಶೇಷವಾಗಿ ಮೀಸಲಾತಿ ನೀಡಬೇಕೆಂದು ಶಿಫಾರಸು ಮಾಡಿದ್ದಾರೆ. ಅದನ್ನು ಸರ್ಕಾರ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಎಸ್ಸಿಗಳಿಗೆ ಒಳ ಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಯಾವುದೇ ತಡೆ ಇಲ್ಲ ಎಂದು ತೀರ್ಪು ನೀಡಿದೆ. ಆದರೆ ಎಸ್ಟಿಗಳಿಗೆ ಒಳಮೀಸಲಾತಿ ನೀಡುವ ಕುರಿತು ಯಾವುದೇ ಆದೇಶ ನೀಡಿಲ್ಲ. ಇದರಿಂದ 12 ಅರಣ್ಯ ಅದಿವಾಸಿ ಸಮುದಾಯಗಳಿಗೆ ಅನ್ಯಾಯವಾಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಅರಣ್ಯ ಆದಿವಾಸಿಗಳಿಗೆ ಶೇ.3ರಷ್ಟು ಮೀಸಲಾತಿ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದ ಕಾರ್ಯದರ್ಶಿ ಡಾ.ಸಿ.ಮಾದೇಗೌಡ, ಮುಖಂಡರಾದ ಮುತ್ತಯ್ಯ, ದಾಸೇಗೌಡ, ಕೇತಮ್ಮ, ಕೋಣೂರೇಗೌಡ, ಪುಟ್ಟಮ್ಮ, ಇತರರು ಭಾಗವಹಿಸಿದ್ದರು.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…