ಚಾಮರಾಜನಗರ

ಚಾಮರಾಜನಗರ: ನಂಜೆದೇವಪುರ ಸುತ್ತಮುತ್ತ ಹುಲಿಗಳಿಗಾಗಿ ಶೋಧ ಕಾರ್ಯ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ.

ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದಲ್ಲಿ ಹುಲಿಗಳು ದಿನಕ್ಕೊಂದು ಪಥ ಬದಲಾಯಿಸುತ್ತಿದ್ದು, ಕಳೆದ ತಡರಾತ್ರಿ ಜಮೀನಿನ ಕಡೆ ಸಾಗಿವೆ. ಹುಲಿಗಳ ಚಲನವಲನದ ದೃಶ್ಯ ಜಮೀನಿನಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.

ಇದನ್ನು ಓದಿ: 5 ಹುಲಿಗಳ ದರ್ಶನ : ಸೆರೆಗೆ ಆನೆಗಳ ನೆರವು ; ಗ್ರಾಮದಲ್ಲಿ ನಿಷೇಧಾಜ್ಞೆ

ಹುಲಿಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದು, ದುಬಾರೆ ಆನೆ ಶಿಬಿರದಿಂದ ಎರಡು ಸಾಕಾನೆಗಳನ್ನು ಬಳಸಿಕೊಂಡು ಹುಲಿಗಳ ಸೆರೆಗೆ ಮುಂದಾಗಿದ್ದಾರೆ.

ನುರಿತ ಪಶು ವೈದ್ಯರು ಕೂಡ ಸ್ಥಳದಲ್ಲಿ ಬೀಡುಬಿಟ್ಟಿದ್ದು, ಹುಲಿಗಳಿಗೆ ಅರವಳಿಕೆ ಚುಚ್ಚು ಮದ್ದು ನೀಡಿ ಅವುಗಳನ್ನು ಸೆರೆ ಹಿಡಿಯಲು ಹುಡುಕಾಟ ನಡೆಸಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

4 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

4 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

4 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

4 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

4 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

4 hours ago