ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗದ ಅರಣ್ಯದಂಚಿನ ಸೋಲಿಗ ಬುಡಕಟ್ಟು ಕುಟುಂಬಗಳಿಗೆ ʻಸೂರುʼ ಒದಗಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.
ಹೌದು.. ಇಂದಿಗೂ ಬಹುತೇಕ ಸೋಲಿಗರು ಜೋಪಡಿಗಳಲ್ಲಿ ವಾಸಿಸುತ್ತಿದ್ದು, ಇವರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ವಿಶೇಷ ಯೋಜನೆಯಡಿ ಮನೆಗಳನ್ನು ಮಂಜೂರು ಮಾಡುವಂತೆ ಸರ್ಕಾರಕ್ಕೆ ಜಿಲ್ಲಾಡಳಿತ ಪ್ರಸ್ತಾವನೆ ಸಲ್ಲಿಸಿದೆ. ವಿಶೇಷ ಯೋಜನೆಯಡಿ 2995ಮನೆ ನಿರ್ಮಿಸುವ ಬಗ್ಗೆ ಜಿಲ್ಲಾಡಳಿತ ಚಿಂತನೆ ನಡೆಸಿದೆ.
ಇನ್ನೂ ಇದೇ ಸೋಲಿಗರಿಗೆ ಮನೆ ನಿರ್ಮಿಸುವ ಚಿಂತನೆ ನಡೆಸಿದ್ದ ಜಿಲ್ಲಾಡಳಿತ ಈ ಹಿಂದೆ ಸರ್ವೆ ಕಾರ್ಯ ಕೂಡ ನಡೆಸಿತ್ತು. ಈ ವೇಳೆ 243 ಕುಟುಂಬಗಳಿಗೆ ಮನೆ ಜೊತೆಗೆ ನಿವೇಶನ ಇಲ್ಲದಿರುವುದು ಕಂಡು ಬಂದಿತ್ತು. ಇಂಹತ ಕುಟುಂಬಗಳಿಗೆ ನಿವೇಶನದ ಜೊತೆಗೆ ಮನೆ ನಿರ್ಮಿಸಿ ಜಿಲ್ಲಾಡಳಿತ ತೀರ್ಮಾನಿಸಿದೆ.
ಈ ಯೋಜನೆಯಡಿ ಪ್ರತಿ ವಸತಿಗೆ 5ಲಕ್ಷದಂತೆ 3ಸಾವಿರ ಮನೆಗಳಿಗೆ 150 ಕೋಟಿ ರೂ. ಅಂದಾಜು ವೆಚ್ಚ ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಮಹತ್ವ ಕಾರ್ಯಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸಹ ಕೈಜೋಡಿಸಿದ್ದಾರೆ. ಸರ್ಕಾರ ಅನುಮೋದನೆ ಕೊಟ್ಟರೆ ಜಿಲ್ಲಾಡಳಿತ ಈ ಯೋಜನೆಗೆ ʻಸಿದ್ದು ನಿವಾಸʼ ಯೋಜನೆ ಎಂದು ಹೆಸರಿಡಲೂ ಕೂಡ ಚಿಂತಿಸಿದೆ.
ಒಟ್ಟಾರೆ…. ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಸೋಲಿಗರಿಗೆ ಸೂರು ಒದಗಿಸಲು ಜಿಲ್ಲಾಡಳಿತ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಅಸ್ತು ಎನ್ನಲಿದೆಯೇ ಎಂದು ಕಾದು ನೋಡಬೇಕಿದೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…