ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗದ ಅರಣ್ಯದಂಚಿನ ಸೋಲಿಗ ಬುಡಕಟ್ಟು ಕುಟುಂಬಗಳಿಗೆ ʻಸೂರುʼ ಒದಗಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.
ಹೌದು.. ಇಂದಿಗೂ ಬಹುತೇಕ ಸೋಲಿಗರು ಜೋಪಡಿಗಳಲ್ಲಿ ವಾಸಿಸುತ್ತಿದ್ದು, ಇವರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ವಿಶೇಷ ಯೋಜನೆಯಡಿ ಮನೆಗಳನ್ನು ಮಂಜೂರು ಮಾಡುವಂತೆ ಸರ್ಕಾರಕ್ಕೆ ಜಿಲ್ಲಾಡಳಿತ ಪ್ರಸ್ತಾವನೆ ಸಲ್ಲಿಸಿದೆ. ವಿಶೇಷ ಯೋಜನೆಯಡಿ 2995ಮನೆ ನಿರ್ಮಿಸುವ ಬಗ್ಗೆ ಜಿಲ್ಲಾಡಳಿತ ಚಿಂತನೆ ನಡೆಸಿದೆ.
ಇನ್ನೂ ಇದೇ ಸೋಲಿಗರಿಗೆ ಮನೆ ನಿರ್ಮಿಸುವ ಚಿಂತನೆ ನಡೆಸಿದ್ದ ಜಿಲ್ಲಾಡಳಿತ ಈ ಹಿಂದೆ ಸರ್ವೆ ಕಾರ್ಯ ಕೂಡ ನಡೆಸಿತ್ತು. ಈ ವೇಳೆ 243 ಕುಟುಂಬಗಳಿಗೆ ಮನೆ ಜೊತೆಗೆ ನಿವೇಶನ ಇಲ್ಲದಿರುವುದು ಕಂಡು ಬಂದಿತ್ತು. ಇಂಹತ ಕುಟುಂಬಗಳಿಗೆ ನಿವೇಶನದ ಜೊತೆಗೆ ಮನೆ ನಿರ್ಮಿಸಿ ಜಿಲ್ಲಾಡಳಿತ ತೀರ್ಮಾನಿಸಿದೆ.
ಈ ಯೋಜನೆಯಡಿ ಪ್ರತಿ ವಸತಿಗೆ 5ಲಕ್ಷದಂತೆ 3ಸಾವಿರ ಮನೆಗಳಿಗೆ 150 ಕೋಟಿ ರೂ. ಅಂದಾಜು ವೆಚ್ಚ ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಮಹತ್ವ ಕಾರ್ಯಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸಹ ಕೈಜೋಡಿಸಿದ್ದಾರೆ. ಸರ್ಕಾರ ಅನುಮೋದನೆ ಕೊಟ್ಟರೆ ಜಿಲ್ಲಾಡಳಿತ ಈ ಯೋಜನೆಗೆ ʻಸಿದ್ದು ನಿವಾಸʼ ಯೋಜನೆ ಎಂದು ಹೆಸರಿಡಲೂ ಕೂಡ ಚಿಂತಿಸಿದೆ.
ಒಟ್ಟಾರೆ…. ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಸೋಲಿಗರಿಗೆ ಸೂರು ಒದಗಿಸಲು ಜಿಲ್ಲಾಡಳಿತ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಅಸ್ತು ಎನ್ನಲಿದೆಯೇ ಎಂದು ಕಾದು ನೋಡಬೇಕಿದೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…