ಚಾಮರಾಜನಗರ: ಮೇಕೆಗಳನ್ನು ಭಾಗ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತಂದೆಯನ್ನೇ ಪುತ್ರ ಮಹಾಶಯನೋರ್ವ ಕೊಲೆ ಮಾಡಿ ನದಿಗೆ ತಳ್ಳಿರುವ ಘಟನೆ ಹನೂರು ತಾಲ್ಲೂಕಿನ ಗೋಪಿನಾಥಂ ಸಮೀಪದ ಆತೂರು ಗ್ರಾಮದಲ್ಲಿ ನಡೆದಿದೆ.
ಶಂಕರನ್ ಎಂಬುವವರೇ ಹತ್ಯೆಯಾದವರಾಗಿದ್ದಾರೆ. ಇವರ ಎರಡನೇ ಮಗ ಗೋವಿಂದರಾಜ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.
ಮೇಕೆಗಳನ್ನು ಭಾಗ ಮಾಡುವ ವಿಚಾರಕ್ಕೆ ಶಂಕರನ್ ಹಾಗೂ ಗೋವಿಂದರಾಜ್ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಗೋವಿಂದರಾಜ್ ಬಲವಾದ ಆಯುಧನಿಂದ ಶಂಕರನ್ಗೆ ಗಾಯಗೊಳಿಸಿ ನದಿಗೆ ಎಸೆದಿದ್ದನು.
ಶಂಕರನ್ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬದವರು ಪೊಲೀಸ್ ಠಾಣೆಗೆ ನಾಪತ್ತೆ ದೂರು ನೀಡಿದ್ದರು. ಕಳೆದ ಸಂಜೆ ಕಾವೇರಿ ನದಿಯಲ್ಲಿ ಶಂಕರನ್ ಮೃತದೇಹ ಪತ್ತೆಯಾಗಿದೆ. ಮೃತರ ಪತ್ನಿಯ ದೂರಿನ ಮೇರೆಗೆ ವಿಚಾರಣೆ ನಡೆಸಿದಾಗ ಆರೋಪಿ ಗೋವಿಂದರಾಜ್ ಸತ್ಯ ಬಾಯ್ಬಿಟ್ಟಿದ್ದಾನೆ. ಈ ಸಂಬಂಧ ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…