ಚಾಮರಾಜನಗರ

ಚಾ.ನಗರ ವಿ.ವಿ | ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಎಚ್‌.ಡಿಗೆ ಅವಕಾಶ

ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ ವೇತನವೂ ದೊರೆಯುತ್ತಿದೆ. ವಿದ್ಯಾರ್ಥಿಗಳು ಈ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಚಾಮರಾಜನಗರ ವಿವಿ ಕುಲಸಚಿವ ಪ್ರೊ. ಕೆ. ಎಂ. ಮಹಾದೇವನ್ ತಿಳಿಸಿದರು.

ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನ ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆಗಳ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದ ಅವರು, ಸ್ನಾತಕೋತ್ತರ ಪದವಿ ಪಡೆದ ನಂತರ ಪಿಎಚ್. ಡಿ. ಪದವಿ ಪಡೆಯಲು ಅವಕಾಶವಿದೆ. ಐದು ವರ್ಷಗಳ ಕಾಲ ಇದಕ್ಕಾಗಿ ದೊಡ್ಡ ಮೊತ್ತದ ವಿದ್ಯಾರ್ಥಿ ವೇತನವೂ ದೊರಕುತ್ತದೆ. ಈ ಶೈಕ್ಷಣಿಕ ವರ್ಷದಿಂದ ಪಿಎಚ್. ಡಿ. ಕೋರ್ಸ್ ಆರಂಭಿಸಲಾಗಿದ್ದು ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇದೇ ಕಾಲೇಜಿನಲ್ಲಿ ಅನೇಕ ವಿದ್ಯಾರ್ಥಿನಿಯರು ಜನಪದ ಗಾಯನ, ಭಕ್ತಿಗೀತೆ, ದೇಶಭಕ್ತಿ ಗೀತೆ, ವಚನ ಗಾಯನ ಹೀಗೆ ಅನೇಕ ಪಠ್ಯೇತರ ಚಟುವಟಿಕೆಗಳಲ್ಲಿ ಬಹುಮಾನ ಪಡೆದಿದ್ದೀರಿ. ಪಠ್ಯ ಕಲಿಕೆ ಎಂದರೆ ವಿದ್ಯಾರ್ಥಿಗಳಿಗೆ ಅದೊಂದು ಕಡ್ಡಾಯ ಹಾಗೂ ಕಠಿಣ ಎಂಬ ಭಾವನೆ ಇದೆ. ಆದರೆ ಪಠ್ಯೇತರ ಚಟುವಟಿಕೆಗಳ ಬಗ್ಗೆ ಆಸಕ್ತಿ ಇರುತ್ತದೆ. ನೀವು ಆಸಕ್ತಿಪಡುವ, ನಿಮಗೆ ಸಂತಸ ತರುವ ವಿಷಯಗಳನ್ನೇ ಪಠ್ಯದ ವಿಷಯಗಳನ್ನಾಗಿ ತೆಗೆದುಕೊಂಡಾಗ ಉತ್ತಮ ಸಾಧನೆ ಮಾಡಬಹುದು ಎಂದರು.

ಮೈಸೂರಿನಲ್ಲಿ ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿವಿ ಇದೆ. ಇಲ್ಲಿ ವಿವಿಧ ಪ್ರಕಾರಗಳ ಕಲೆಯ ವಿಷಯಗಳಿದ್ದು ಅದನ್ನು ನೀವು ಆಯ್ಕೆ ಮಾಡಿಕೊಳ್ಳಬಹುದು. ಅದರಲ್ಲೇ ಪದವಿ ಪಡೆಯಬಹುದು. ಅದರಲ್ಲೇ ಉದ್ಯೋಗವನ್ನೂ ಪಡೆಯಬಹುದು ಎಂದು ಅವರು ಸಲಹೆ ನೀಡಿದರು.

ಚಾಮರಾಜನಗರ ಜಿಲ್ಲೆ ಎಂದರೆ ಜಾನಪದ ಕಲೆಗಳ ತವರೂರು. ಮಂಟೇಸ್ವಾಮಿ, ಸಿದ್ಧಪ್ಪಾಜಿ, ಮಲೆ ಮಹದೇಶ್ವರ, ಬಿಳಿಗಿರಿರಂಗನಾಥಸ್ವಾಮಿ ಇದೇ ನೆಲದವರು. ಆದರೆ ಇಲ್ಲಿ ಜಾನಪದ ವಿಶ್ವವಿದ್ಯಾಲಯ ಇಲ್ಲದಿರುವ ಕೊರತೆಯಿದೆ. ಜಿಲ್ಲೆಯಲ್ಲಿ ಜಾನಪದ ವಿವಿ ಸ್ಥಾಪಿಸಲು ಜನತೆ ಹೋರಾಟ ನಡೆಸಬೇಕು ಎಂದು ಮಹಾದೇವನ್ ಹೇಳಿದರು.

ಜೆಎಸ್‌ಎಸ್ ಬಿ. ಇಡಿ. ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಸಿ. ಬಸವಣ್ಣ ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಪದವಿ ವ್ಯಾಸಂಗ ಪ್ರಮುಖ ಘಟ್ಟ. ಹೆಣ್ಣು ಮಕ್ಕಳು ಉತ್ತಮ ವ್ಯಾಸಂಗ ಮಾಡಿ, ಉದ್ಯೋಗ ಪಡೆದರೆ ಅದು ಸಮಾಜದ ಮುನ್ನಡೆಗೆ ಕಾರಣವಾಗುತ್ತದೆ. ಕೇವಲ ಪದವಿ ಪಡೆಯುವುದಕ್ಕೆ ಸೀಮಿತವಾಗದೇ, ಉತ್ತಮ ಜೀವನ ರೂಪಿಸಿಕೊಳ್ಳುವುದಕ್ಕೆ ಸಹಾಯಕವಾಗುವ ಜ್ಞಾನ, ಕೌಶಲವನ್ನು ಬೆಳೆಸಿಕೊಳ್ಳಬೇಕು ಎಂದರು.

ಪದವಿಯ ವಿವಿಧ ವಿಭಾಗಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರನ್ನು ದತ್ತಿ ಪುರಸ್ಕಾರ, ನಗದು ಬಹುಮಾನ ನೀಡಿ ಗೌರವಿಸಲಾಯಿತು. ವಿವಿಧ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಟಿ. ಎಂ. ಮರಿಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜೆಎಸ್‌ಎಸ್ ಮಹಿಳಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವರಾಜಮೂರ್ತಿ, ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಜಮುನಾ, ಗಣಿತ ವಿಭಾಗದ ಮುಖ್ಯಸ್ಥೆ ಅರುಣಾಶ್ರೀ, ದೈಹಿಕ ಶಿಕ್ಷಣ ನಿರ್ದೇಶಕ ಉಮೇಶ್ ಹಾಗೂ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಅನುಶ್ರೀ, ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

30 mins ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

1 hour ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

2 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

3 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

3 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

4 hours ago