ಚಾಮರಾಜನಗರ

ಚಾ.ನಗರ ವಿ.ವಿ | ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಎಚ್‌.ಡಿಗೆ ಅವಕಾಶ

ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ ವೇತನವೂ ದೊರೆಯುತ್ತಿದೆ. ವಿದ್ಯಾರ್ಥಿಗಳು ಈ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಚಾಮರಾಜನಗರ ವಿವಿ ಕುಲಸಚಿವ ಪ್ರೊ. ಕೆ. ಎಂ. ಮಹಾದೇವನ್ ತಿಳಿಸಿದರು.

ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನ ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆಗಳ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದ ಅವರು, ಸ್ನಾತಕೋತ್ತರ ಪದವಿ ಪಡೆದ ನಂತರ ಪಿಎಚ್. ಡಿ. ಪದವಿ ಪಡೆಯಲು ಅವಕಾಶವಿದೆ. ಐದು ವರ್ಷಗಳ ಕಾಲ ಇದಕ್ಕಾಗಿ ದೊಡ್ಡ ಮೊತ್ತದ ವಿದ್ಯಾರ್ಥಿ ವೇತನವೂ ದೊರಕುತ್ತದೆ. ಈ ಶೈಕ್ಷಣಿಕ ವರ್ಷದಿಂದ ಪಿಎಚ್. ಡಿ. ಕೋರ್ಸ್ ಆರಂಭಿಸಲಾಗಿದ್ದು ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇದೇ ಕಾಲೇಜಿನಲ್ಲಿ ಅನೇಕ ವಿದ್ಯಾರ್ಥಿನಿಯರು ಜನಪದ ಗಾಯನ, ಭಕ್ತಿಗೀತೆ, ದೇಶಭಕ್ತಿ ಗೀತೆ, ವಚನ ಗಾಯನ ಹೀಗೆ ಅನೇಕ ಪಠ್ಯೇತರ ಚಟುವಟಿಕೆಗಳಲ್ಲಿ ಬಹುಮಾನ ಪಡೆದಿದ್ದೀರಿ. ಪಠ್ಯ ಕಲಿಕೆ ಎಂದರೆ ವಿದ್ಯಾರ್ಥಿಗಳಿಗೆ ಅದೊಂದು ಕಡ್ಡಾಯ ಹಾಗೂ ಕಠಿಣ ಎಂಬ ಭಾವನೆ ಇದೆ. ಆದರೆ ಪಠ್ಯೇತರ ಚಟುವಟಿಕೆಗಳ ಬಗ್ಗೆ ಆಸಕ್ತಿ ಇರುತ್ತದೆ. ನೀವು ಆಸಕ್ತಿಪಡುವ, ನಿಮಗೆ ಸಂತಸ ತರುವ ವಿಷಯಗಳನ್ನೇ ಪಠ್ಯದ ವಿಷಯಗಳನ್ನಾಗಿ ತೆಗೆದುಕೊಂಡಾಗ ಉತ್ತಮ ಸಾಧನೆ ಮಾಡಬಹುದು ಎಂದರು.

ಮೈಸೂರಿನಲ್ಲಿ ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿವಿ ಇದೆ. ಇಲ್ಲಿ ವಿವಿಧ ಪ್ರಕಾರಗಳ ಕಲೆಯ ವಿಷಯಗಳಿದ್ದು ಅದನ್ನು ನೀವು ಆಯ್ಕೆ ಮಾಡಿಕೊಳ್ಳಬಹುದು. ಅದರಲ್ಲೇ ಪದವಿ ಪಡೆಯಬಹುದು. ಅದರಲ್ಲೇ ಉದ್ಯೋಗವನ್ನೂ ಪಡೆಯಬಹುದು ಎಂದು ಅವರು ಸಲಹೆ ನೀಡಿದರು.

ಚಾಮರಾಜನಗರ ಜಿಲ್ಲೆ ಎಂದರೆ ಜಾನಪದ ಕಲೆಗಳ ತವರೂರು. ಮಂಟೇಸ್ವಾಮಿ, ಸಿದ್ಧಪ್ಪಾಜಿ, ಮಲೆ ಮಹದೇಶ್ವರ, ಬಿಳಿಗಿರಿರಂಗನಾಥಸ್ವಾಮಿ ಇದೇ ನೆಲದವರು. ಆದರೆ ಇಲ್ಲಿ ಜಾನಪದ ವಿಶ್ವವಿದ್ಯಾಲಯ ಇಲ್ಲದಿರುವ ಕೊರತೆಯಿದೆ. ಜಿಲ್ಲೆಯಲ್ಲಿ ಜಾನಪದ ವಿವಿ ಸ್ಥಾಪಿಸಲು ಜನತೆ ಹೋರಾಟ ನಡೆಸಬೇಕು ಎಂದು ಮಹಾದೇವನ್ ಹೇಳಿದರು.

ಜೆಎಸ್‌ಎಸ್ ಬಿ. ಇಡಿ. ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಸಿ. ಬಸವಣ್ಣ ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಪದವಿ ವ್ಯಾಸಂಗ ಪ್ರಮುಖ ಘಟ್ಟ. ಹೆಣ್ಣು ಮಕ್ಕಳು ಉತ್ತಮ ವ್ಯಾಸಂಗ ಮಾಡಿ, ಉದ್ಯೋಗ ಪಡೆದರೆ ಅದು ಸಮಾಜದ ಮುನ್ನಡೆಗೆ ಕಾರಣವಾಗುತ್ತದೆ. ಕೇವಲ ಪದವಿ ಪಡೆಯುವುದಕ್ಕೆ ಸೀಮಿತವಾಗದೇ, ಉತ್ತಮ ಜೀವನ ರೂಪಿಸಿಕೊಳ್ಳುವುದಕ್ಕೆ ಸಹಾಯಕವಾಗುವ ಜ್ಞಾನ, ಕೌಶಲವನ್ನು ಬೆಳೆಸಿಕೊಳ್ಳಬೇಕು ಎಂದರು.

ಪದವಿಯ ವಿವಿಧ ವಿಭಾಗಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರನ್ನು ದತ್ತಿ ಪುರಸ್ಕಾರ, ನಗದು ಬಹುಮಾನ ನೀಡಿ ಗೌರವಿಸಲಾಯಿತು. ವಿವಿಧ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಟಿ. ಎಂ. ಮರಿಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜೆಎಸ್‌ಎಸ್ ಮಹಿಳಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವರಾಜಮೂರ್ತಿ, ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಜಮುನಾ, ಗಣಿತ ವಿಭಾಗದ ಮುಖ್ಯಸ್ಥೆ ಅರುಣಾಶ್ರೀ, ದೈಹಿಕ ಶಿಕ್ಷಣ ನಿರ್ದೇಶಕ ಉಮೇಶ್ ಹಾಗೂ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಅನುಶ್ರೀ, ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

5 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

5 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

16 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

16 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

16 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

16 hours ago