ಕೊಳ್ಳೇಗಾಲ: ಕಾಡಾನೆಯೊಂದು ನಡೆಸಿದ ದಾಳಿಯಲ್ಲಿ ವೃದ್ಧನೊಬ್ಬ ಮೃತಪಟ್ಟ ಘಟನೆ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.
ತಾಲ್ಲೂಕಿನ ಕರಳಕಟ್ಟೆ ಗ್ರಾಮದ ನಿವಾಸಿ ಸಣ್ಣಮಾದ (72) ಆನೆ ದಾಳಿಯಿಂದ ಮೃತಪಟ್ಟವರಾಗಿದ್ದಾರೆ.
ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಕಳಕಟ್ಟೆ ಗ್ರಾಮಕ್ಕೆ ಕಾಡಾನೆಯೊಂದು ಬಂದಿದೆ. ಸಣ್ಣಮಾದ ಅವರು ಪತ್ನಿ ಜಡೆ ಮಾದಮ್ಮ, ನಾದಿನಿ ರಂಗಮ್ಮ ಜೊತೆ ಮೇಗಲದೊಡ್ಡಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಆನೆ ದಾರಿ ಮಧ್ಯೆ ನಿಂತಿತ್ತು. ಆನೆಯಿಂದ ತಪ್ಪಿಸಿಕೊಳ್ಳಲು ಸಣ್ಣಮಾದ ಸೇರಿದಂತೆ ಮೂವರೂ ಓಡಿದರು.ಸಣ್ಣ ಮಾದ ಅವರನ್ನು ಅಟ್ಟಿಸಿದ ಆನೆ ದಾಳಿ ಮಾಡಿದೆ. ಪರಿಣಾಮ ವೃದ್ಧ ಸಾವನ್ನಪ್ಪಿದ್ದಾರೆ. ಉಳಿದವರು ಕೂದಲೆಳೆ ಅಂತರದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಂದಕುಮಾರ್, ಡಿಆರ್ಎಫ್ಒ ಮಹೇಶ್ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಗಣೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎಸಿಎಫ್ ನಂದಕುಮಾರ್ ಭೇಟಿ ನೀಡಿದ ವೇಳೆ ಗ್ರಾಮಸ್ಥರು, ಸಣ್ಣ ಮಾದ ಅವರ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿದರು. ಇದಕ್ಕೆ ʼಇಲಾಖೆಯಿಂದ ಸಿಗುವ ಪರಿಹಾರ ಮತ್ತು ಸೌಲಭ್ಯಗಳನ್ನು ಸಣ್ಣಮಾದ ಅವರ ಕುಟುಂಬಕ್ಕೆ ಸಿಗುವಂತೆ ಮಾಡಲಾಗುವುದುʼ ಎಂದು ಭರವಸೆ ನೀಡಿದರು.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…